ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ರಿಪ್ಪನ್ ಪೇಟೆಯ ಸಾಮಿಲ್ ಡ್ರೈವರ್ ಗುಂಡಪ್ಪ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯ ಕೆರೆಹಳ್ಳಿ ನಿವಾಸಿ ಗುಂಡಪ್ಪ (67) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು. ರಿಪ್ಪನ್ ಪೇಟೆಯ ಪ್ರಸಿದ್ದ ನೆಹರು ಸಾಮಿಲ್ ನಲ್ಲಿ ಮಿಲ್ ಡ್ರೈವರ್ ಆಗಿ ಸುಮಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಇವರು ಪ್ರಸ್ತುತ ಆಯನೂರು ಸಾಮಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸಿದ್ದಪ್ಪನಗುಡಿಯ ಸ್ಮಶಾನದಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗುಂಡಪ್ಪರವರ ನಿಧನಕ್ಕೆ…

Read More

ರಿಪ್ಪನ್ ಪೇಟೆಯಲ್ಲಿ ನಡದಿದ್ದೇ 2 ವರ್ಷಗಳ ನಂತರ ಗ್ರಾಮಸಭೆ ಆದರೂ ಹಿರಿಯ ಪತ್ರಕರ್ತ ಧರಣಿ ನಡೆಸಿದ್ದೇಕೆ ? ಹಲವು ರೋಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತೇ ರಿಪ್ಪನ್ ಪೇಟೆಯ ಗ್ರಾಮಸಭೆ!!

ರಿಪ್ಪನ್ ಪೇಟೆ: ಬರೊಬ್ಬರಿ ಎರಡು ವರ್ಷಗಳ ನಂತರ  ರಿಪ್ಪನ್ ಪೇಟೆಯ ಕುವೆಂಪು ಸಭಾಂಗಣದಲ್ಲಿ  ಗ್ರಾಮಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆ ಹಲವು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಹೌದು,ಎರಡು ವರ್ಷಗಳ ನಂತರ ನಡೆಯುತ್ತಿದ್ದ ಗ್ರಾಮ ಸಭೆಯಲ್ಲಿ ರಿಪ್ಪನ್ ಪೇಟೆ  ಗ್ರಾಮ ಪಂಚಾಯತಿಯ ಆಡಳಿತ ಕಾರ್ಯ ವೈಖರಿ ಖಂಡಿಸಿ ಹಿರಿಯ ಪತ್ರಕರ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಸಭೆಯಲ್ಲಿ ಏಕಾಂಗಿ ಧರಣಿ ನಡೆಸಿದ ಪ್ರಸಂಗವು ನಡೆಯಿತು. ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಬರೀಶ್ ನಗರದಲ್ಲಿ ಒಂದೇ ಕುಟುಂಬದ ಇಬ್ಬರ ನಡುವೆ ಇದ್ದ ಖಾತೆಗೆ…

Read More

ನೇರಲೆ ಮನೆ ದೇವಸ್ಥಾನದ ಜಾಗಕ್ಕೆ ಬೇಲಿ ಹಾಕಲು ಮುಂದಾದ ವ್ಯಕ್ತಿ !!! ಕೇಳಲು ಹೋದ ಗ್ರಾಮಸ್ಥರಿಗೆ ಕೊಲೆಬೆದರಿಕೆ ? ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು !!! ಹಾಗಾದರೆ ಆ ವ್ಯಕ್ತಿ ಯಾರು ??

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಹಣದ ಪ್ರಭಾವ ಬಳಸಿ  ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವ  ಘಟನೆ ನಡೆದಿದೆ. ಇಂದು ರಿಪ್ಪನ್ ಪೇಟೆ ಗ್ರಾಪಂ ಸಭಾಂಗಣದಲ್ಲಿ ಪತ್ರೀಕಾ ಗೋಷ್ಟಿ ನಡೆಸಿ ಮಾತನಾಡಿದ ನೇರಲಮನೆ ಗ್ರಾಮಸ್ಥರು ದೇವಸ್ಥಾನದ ಜಾಗವನ್ನು ಅಕ್ರಮಿಸಿಕೊಂಡಿರುವ ಬಗ್ಗೆ ನೇರಳಮನೆ ಗ್ರಾಮಸ್ಥರೆಲ್ಲಾ ಸೇರಿ ನಾಗೇಶ್ ಅಲಿಯಾಸ್ ಬಡ್ಡಿ ನಾಗೇಶ್ ಎಂಬ…

Read More

ಎಂಎಲ್ಸಿ ಚುನಾವಣೆ :: ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ…

Read More

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

ರಿಪ್ಪನ್ ಪೇಟೆ , ಸಿಂಗನ ಮನೆ ಹಾಗೂ ತುಮರಿ ಗ್ರಾಪಂ ನ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ :

ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗ್ರಾ.ಪಂ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ(ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ(ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ(ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ(ಸಾಮಾನ್ಯ ಅಭ್ಯರ್ಥಿ) ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಮಾಸಿಕ ಗೌರವ ಸಂಭಾವನೆ ರೂ.12,000 ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯ್ತಿ…

Read More

ಹೊಸನಗರ : ಅಭಿಮಾನಿಗಳ ನೆಚ್ಚಿನ ಆಟೋರಾಜ ಶಂಕರ್ ನಾಗ್ ಜನ್ಮದಿನ ವಿಶೇಷವಾಗಿ ಆಚರಣೆ :

ಹೊಸನಗರ: ಕನ್ನಡ ಚಿತ್ರರಂಗದಲ್ಲಿ ಕಡಿಮೆ ಅವಧಿಯಲ್ಲಿ ತನ್ನದೇ ಆದ ಚಾಪು ಮೂಡಿಸಿ, ಕಣ್ಮರೆಯಾದ ಅಭಿಮಾನಿಗಳ ನೆಚ್ಚಿನ ಆಟೋ ರಾಜ ಶಂಕರ್ ನಾಗ್​ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರ ರಂಗವನ್ನು ಹಾಲಿವುಡ್ ಸಿನಿಮಾ ಮಟ್ಟಿಗೆ ಬೆಳೆಸಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಆದರೆ, ಅದು ನನಸಾಗುವ ಮೊದಲೇ ಕರಾಟೆ ಕಿಂಗ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಶಂಕರ್ ನಾಗ್ ನಮ್ಮೊಂದಿಗೆ ಇದ್ದಿದ್ದರೆ, ಇಂದು 67ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಹೊಸನಗರದ ಚೌಡಮ್ಮ ರಸ್ತೆಯ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More