ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ ಹಲವಾರು ಅತಿಥಿ ಉಪನ್ಯಾಸಕರು ಸಾವಿಗೀಡಾಗಿ ಅವರ ಕುಟುಂಬಗಳು ಬೀದಿಗೆ ಬಂದಿವೆ. ಇನ್ನು ಕೆಲವು ಅತಿಥಿ ಉಪನ್ಯಾಸಕರು ಶೂ ಪಾಲಿಶ್ ಮಾಡುವ ಹಾಗೂ ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಎದುರಾಗಿದೆ.
ನಿನ್ನೆಯ ದಿನ ತೀರ್ಥಹಳ್ಳಿ ಕಾಲೇಜಿನಲ್ಲಿ ಸರಿಸುಮಾರು 13 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರಾದ ಹರ್ಷ ಶ್ಯಾಂನ್ ಬೋಗ್ ರವರು ಆರ್ಥಿಕ ಸಂಕಷ್ಟಕ್ಕೆ ನಲುಗಿ ಸಾವಿಗೆ ಶರಣಾಗಿದ್ದಾರೆ ಹಾಗಾಗಿ ಗೌರವಾನ್ವಿತ ವಿದ್ಯಾವಂತ ಸಮುದಾಯಕ್ಕೆ ಸರ್ಕಾರ ಈ ರೀತಿಯ ಸಂಕಷ್ಟಕ್ಕೆ ಸಿಲುಕಿರುವುದು ದುರದೃಷ್ಟಕರ ಸಂಗತಿಯಾಗಿದೆ ದಯಮಾಡಿ ಇನ್ನಾದ್ರೂ ಸರ್ಕಾರ ಎಚ್ಚೆತ್ತುಕೊಂಡು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ ಎಂದರು.
ಸೇವಾ ಸಕ್ರಮಾತಿ (ಜೆಒಸಿ ಮಾದರಿಯಲ್ಲಿ) ಸೇವಾಭದ್ರತೆ (ಪಶ್ಚಿಮ ಬಂಗಾಳದ ಮಾದರಿಯಲ್ಲಿ) ಹಾಗೂ ಕರ್ನಾಟಕ ಸರ್ಕಾರದ ನಾಗರಿಕ ಸೇವೆಯಲ್ಲಿ ಸೇವಾ ವಿಲೀನಗೊಳಿಸುವುದು, ವೈದ್ಯಕೀಯ ಸೌಲಭ್ಯಗಳನ್ನು ನೀಡುವ ಮೂಲಕ ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ನಿಲ್ಲಬೇಕು ಎಂದು ಮನವಿ ಮಾಡಿದರು.
ಈ ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರುಗಳಾದ ಅರ್ಚನಾ ಎನ್ ಎಂ,ರಾಜೇಶ್,ಸ್ಮಿತಾ,ರೂಪ ಎಂ ಎನ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್