ಕರ್ನಾಟಕದ ಪವರ್ ಸ್ಟಾರ್ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ.
ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್ ಸ್ಟೋರಿ ರಾಜ್ ಕುಮಾರ್ ವೃತ್ತ ಎಂದು ನಾಮಕರಣ ಮಾಡಿದರು.
ಅಪ್ಪು ಕಣ್ಣು ದಾನ ಮಾಡಿ ಹೇಗೆ ಸಾರ್ಥಕತೆ ಮೆರೆದರೋ ಅದೇ ರೀತಿ ಈ ಗ್ರಾಮದ ಪ್ರತಿಯೊಂದು ಮನೆಯ ಒಬ್ಬ ಸದಸ್ಯರು ಕಡ್ಡಾಯವಾಗಿ ನೇತ್ರದಾನ ಮಾಡಲೇಬೇಕೆಂದು ಪ್ರತಿಜ್ಞೆ ಕೂಡ ಮಾಡಿ ಮಾದರಿಯಾಗಿದ್ದಾರೆ.
ಊರಿನ ಸಾವಿರಾರು ಗ್ರಾಮಸ್ಥರು ಸೇರಿ ಅಪ್ಪುವಿನ ಭಾವಚಿತ್ರದ ಮೆರವಣಿಗೆಯೊಂದಿಗೆ ದೀಪವನ್ನು ಬೆಳಗಿಸಿ ಅದ್ದೂರಿ ಮೆರವಣಿಗೆಯನ್ನು ಕೂಡ ನಡೆಸಿದರು.
ವಿಶೇಷವಾಗಿ ಈ ಊರಿನ ಗ್ರಾಮಸ್ಥರು ಅಪ್ಪುವಿನ ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟವನ್ನು ಬಡಸಿದರು ನಿಜಕ್ಕೂ ಕೂಡ ಇದು ವಿಶೇಷವಾಗಿತ್ತು. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರು ಕೂಡಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ಪವನ್ ಕುಮಾರ್ ಕಠಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್