ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ.
ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ.
ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ ಎಸ್ ಅರುಣ್ ಪರ ಪ್ರಚಾರ ಕಾರ್ಯಕ್ರಮದಲ್ಲಿ ಅರಸಾಳು ಗ್ರಾಮ ಪಂಚಾಯತ್ ಸದಸ್ಯೆ ಪೂರ್ಣಿಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಆದರೆ ಸಂಜೆಯ ಹೊತ್ತಿಗೆ ಗ್ರಾಪಂ ಸದಸ್ಯೆ ಪೂರ್ಣಿಮಾ ಮತ್ತೆ ಕಾಂಗ್ರೆಸ್ ಗೆ ಮರಳಿದ್ದಾರೆ.ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯೆ ಪೂರ್ಣಿಮಾ ನನಗೆ ರಾಜಕೀಯದ ತಿಳುವಳಿಕೆ ಅಷ್ಟಾಗಿ ತಿಳಿದಿಲ್ಲ.ನನ್ನನ್ನು ಹೀಗೊಂದು ಗ್ರಾಮ ಪಂಚಾಯತ್ ಸದಸ್ಯರ ಕಾರ್ಯಕ್ರಮವಿದೆ ಎಂದು ಕರೆದುಕೊಂಡು ಬಂದು ಸಚಿವರ ಬಳಿ ಶಾಲು ಹಾಕಿಸಿದರು.ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ನನಗೆ ನಂತರವೇ ತಿಳಿದಿದ್ದು ,ನಾನು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ರವರ ಬೆಂಬಲದಿಂದ ಗೆದ್ದು ಬಂದಿದ್ದೇನೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಬಿಜೆಪಿಯವರು ಅಮಾಯಕ ಸದಸ್ಯರನ್ನು ಈ ರೀತಿಯಾಗಿ ದಾರಿ ತಪ್ಪಿಸುವ ಕೆಲಸಕ್ಕೆ ಕೈ ಹಾಕಬಾರದು.ನೈತಿಕತೆಯಿಂದ ಚುನಾವಣೆ ಎದುರಿಸಿ ಗೆಲ್ಲಲಿ, ಬಿಜೆಪಿಯವರಿಗೆ ಈಗಲೇ ಸೋಲಿನ ಭಯ ಶುರುವಾಗಿದೆ ಹಾಗಾಗಿ ಹತಾಶರಾಗಿ ಈ ರೀತಿಯಾದ ಕೆಲಸಕ್ಕೆ ಕೈ ಹಾಕುತ್ತಿದ್ದಾರೆ ಎಂದರು.
ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಮಾತನಾಡಿ ಸ್ಥಳೀಯ ಬಿಜೆಪಿ ಮುಖಂಡರುಗಳು ಜಿಲ್ಲಾ ಮಟದ ನಾಯಕರನ್ನು ಹಾಗೂ ಸಚಿವರನ್ನು ಮೆಚ್ಚಿಸಲು ಈ ರೀತಿಯಾಗಿ ಅಮಾಯಕ ಸದಸ್ಯರನ್ನು ಬಲಿ ಕೊಡಬಾರದು.ರಾಜಕೀಯ ದಾಳಕ್ಕೆ ಮುಗ್ದ ಅಮಾಯಕ ಸದಸ್ಯರನ್ನು ಬಲಿಪಶು ಮಾಡುವುದು ಸರಿಯಲ್ಲ ಎಂದರು.
ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷ ಸಾಬ್,ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್,ಶ್ರೀಮಂತ್ ದೂನಾ , ಧನಲಕ್ಷ್ಮಿ,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಸೋಮಶೇಖರ್ ಲಾವಿಗೆರೆ.ಸಾಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಲೂರ್,ಹೆದ್ದಾರಿಪುರ ಗ್ರಾಪಂ ಸದಸ್ಯ ಪ್ರವೀಣ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
(ಇಂದು ಬೆಳಿಗ್ಗೆ ಕಮಲ ಮು(ಹಿ)ಡಿದಿದ್ದ ಪೂರ್ಣಿಮ !!!!!!!!)
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್