ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ ತೆಗೆಯಲಾಗಿದೆ.
ಈ ಕುರಿತು ಮಾತನಾಡಿದ ಅಕ್ಮಲ್, ನನ್ನ ವಿರುದ್ಧ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಮೊದಲು ನನ್ನನ್ನು ಸಭೆಗೆ ಕರೆಯಬೇಕು. ಚರ್ಚೆ ನಡೆಸಬೇಕು, ನೋಟಿಸ್ ನೀಡಬೇಕು. ಯಾವುದೂ ಇಲ್ಲದೆ ಆಂಜನೇಯನ ಆಶೀರ್ವಾದ ಪಡೆದಿದ್ದಕ್ಕೆ ಪದಚ್ಯುತಿ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಸಂಘದಲ್ಲಿ ಒಳಗೊಳಗೆ ಮಾತನಾಡಿಕೊಂಡು ನನ್ನ ಗಮನಕ್ಕೂ ತಾರದೇ ಏಕಾಏಕಿ ಪದಚ್ಯುತಿಗೊಳಿಸಿದ್ದಾರೆ ಎಂದು ಆರೋಪಿಸಿದರು.
ಬೈಲಾದಲ್ಲೇ ಸರ್ವಧರ್ಮ ಒಂದೇ ಎಂದು ಇದೆ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದು, ಏನು ತಪ್ಪು ಎಂದು ಅಕ್ಮಲ್ ಮತ್ತು ಬೆಂಬಲಿಗರು ಜಾಮೀಯ ಮಸೀದಿಗೆ ನ್ಯಾಯ ಕೇಳಲು ಹೋಗಿದ್ದಾರೆ. ಆಗ ಮಸೀದಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಅಕ್ಮಲ್ ಹಾಗೂ ಆತನ ಬೆಂಬಲಿಗರು ಮಸೀದಿಯ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅಕ್ಮಲ್ ಸೇರಿ ನಾಲ್ವರ ವಿರುದ್ಧ ಮಸೀದಿಯ ಧರ್ಮಗುರುಗಳು ದೂರು ನೀಡಿದ್ದಾರೆ.
ಧರ್ಮಗುರುಗಳ ದೂರಿನ ಅನ್ವಯ ನಗರದ ಬಸವನಹಳ್ಳಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ನ್ಯಾಯ ಕೇಳಲು ಹೋದ ಅಕ್ಮಲ್ ವಿರುದ್ಧವೇ 307 ಕಲಂನಡಿ ಕೇಸ್ ದಾಖಲಾಗಿದೆ.
ಅಕ್ಮಲ್ ಅವರು ಸಮಾಜ ಸೇವಕ, ಕಷ್ಟ ಎಂದು ಮನೆಬಾಗಿಲಿಗೆ ಯಾರೇ ಹೋದ್ರು ಕರಗುವ ಮನುಷ್ಯ. ಕೈಲಾದ ಸಹಾಯವನ್ನು ಮಾಡ್ತಾರೆ. ಅವರು ಧರ್ಮಗುರುಗಳ ಮೇಲೆ ಹಲ್ಲೆ ಮಾಡಿದ್ರಾ, ಇಲ್ವಾ ಗೊತ್ತಿಲ್ಲ. ಎಲ್ಲರದ್ದೂ ಆರೋಪ-ಪ್ರತ್ಯಾರೋಪವಷ್ಟೆ. ಆದರೆ ಆಂಜನೇಯ ದೇವಸ್ಥಾನಕ್ಕೆ ಹೋದರು ಎಂಬ ಕಾರಣಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರೋದು ಎಷ್ಟು ಸರಿ ಅನ್ನೋ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಒಟ್ಟಾರೆಯಾಗಿ ಜಾತ್ಯಾತೀತತೆ ಎಂಬ ಪದವು ಬಾಯಿ ಮಾತಿಗೆ ಮಾತ್ರ ಸೀಮಿತವಾಗಿದೆಯೋ ಎಂಬ ಅನುಮಾನ ಇತ್ತಿಚಿನ ವಿದ್ಯಮಾನಗಳಿಂದ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

19 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

20 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

21 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

2 days ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

2 days ago