ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ ಎಂದು ಈ ಸಂಧರ್ಭದಲ್ಲಿ ಭರವಸೆ ನೀಡಿದರು.
ನಂತರ ಮಾತನಾಡಿದ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ಼್ ಮೊಬೈಲ್ ಮತ್ತು ಟಿವಿ ಮಾಧ್ಯಮದ
ಪ್ರಭಾವದಿಂದ ಕ್ರೀಡೆಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಆಲುವಳ್ಳಿಯ ಸಿದ್ದಿ ವಿನಾಯಕ ಗೆಳೆಯರ ಬಳಗ ಹಾಗೂ ಊರ ನಾಗರಿಕರು ಪಂದ್ಯಾವಳಿಯನ್ನು ಆಯೋಜಿಸಿ ಅಭಿವೃದ್ಧಿ ಮತ್ತು ಸಂಬಂಧದ ಬೆಸುಗೆಗೆ ಮುನ್ನುಡಿ ಬರೆಯುತ್ತಿರುವದು ಮಾದರಿಯಾಗಿದೆ ಎಂದರು.
ರಾಜ್ಯದ ಅನೇಕ ಭಾಗಗಳಿಂದ ಹಲವಾರು ಪ್ರತಿಭಾನ್ವಿತ ತಂಡಗಳು ಆಗಮಿಸಿದ್ದವು ಈ ಪಂದ್ಯಾವಳಿಯಲ್ಲಿ ಪ್ರಥಮ ಪ್ರಶಸ್ತಿಯನ್ನು ಶಿವಮೊಗ್ಗದ ಯುನೈಟೆಡ್ ತಂಡವು ತನ್ನದಾಗಿಸಿಕೊಂಡರೆ ದ್ವಿತೀಯ ಸ್ಥಾನವನ್ನು ಗರ್ತಿಕೆರೆಯ ಅಮೃತ ವಾಲಿಬಾಲ್ ತಂಡ ತನ್ನದಾಗಿಸಿಕೊಂಡಿತು.ಇನ್ನುಳಿದಂತೆ ಮೂರನೇ ಸ್ಥಾನ ಮಾದಾಪುರ ತಂಡ ಹಾಗೂ ನಾಲ್ಕನೇ ಸ್ಥಾನವನ್ನು ಉಡುಪಿ ತಂಡದ ಪಾಲಾಯಿತು.
ಈ ಸಂಧರ್ಭದಲ್ಲಿ ಮುಖಂಡರಾದ ಈಶ್ವರಪ್ಪ ಗೌಡ ,ರಾಜೇಶ್ ಜೈನ್,ಸಿದ್ದಿ ವಿನಾಯಕ ಗೆಳೆಯರ ಬಳಗ ಆಲುವಳ್ಳಿ ಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಊರಿನ ಹಿರಿಯರು ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್