ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ.
ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ ತೋಟದಲ್ಲಿ ಕೆಲಸ ಮಾಡಿ ಬಂದ ಬರ್ಮಾ ನಂತರ ಸಂಜೆ ಬಂದು ಊಟ ಮುಗಿಸಿಕೊಂಡು ಮನೆಯಲ್ಲಿ ಮಲಗಿದ್ದ ಅವನಿಗೆ ಹೃದಯಾಘಾತವಾಗಿ ಅಸುನಿಗಿದ್ದ. ಈ ವಿಷಯ ತಿಳಿದ ತಕ್ಷಣ ದುಗ್ಗಪ್ಪಗೌಡ ಕುಟುಂಬದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬರ್ಮಾ ಸಾವನ್ನಪ್ಪಿದ್ದ.
ಸಾವಿನ ಸುದ್ದಿಯನ್ನು ಮನೆಯವರಿಗೆ ತಿಳಿಸಲು ದುಗ್ಗಪ್ಪಗೌಡ ತೆರಳಿದರೆ ದಾರಿ ಮಧ್ಯೆ ಅವರಿಗೂ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಅಕ್ಕ ಪಕ್ಕದ ಗ್ರಾಮಸ್ಥರ ನೆರವಿನಿಂದ ಆಸ್ಪತ್ರೆ ತೆಗೆದು ಕೊಂಡು ಹೋದಾರಾದರು ಹೋಗುವ ಸಮಯದಲ್ಲಿ ಮಾರ್ಗಮಧ್ಯೆ ಅವರು ಅಸುನೀಗಿದ್ದಾರೆ.
ದುಗ್ಗಪ್ಪ ಗೌಡ ಸರ್ಕಾರಿ ಪ್ರೌಢಶಾಲೆ ಆರಗ, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ತೀರ್ಥಹಳ್ಳಿ ಮತ್ತು ಸರ್ಕಾರಿ ಪ್ರೌಢಶಾಲೆ ಮೇಗರವಳ್ಳಿಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು .
ಇತ್ತ ಮಾಲೀಕ ಮತ್ತು ಕಾರ್ಮಿಕನ ಹೃದಯಾಘಾತದ ಸುದ್ದಿ ತೀರ್ಥಹಳ್ಳಿ ಜನತೆಯನ್ನು ದಿಗ್ಬ್ರಾಂತಗೊಳಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್