ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಶ್ರೀ ಯೋಗೇಂದ್ರ ಶ್ರೀಗಳು ಹೇಳಿದರು.
ಕಾರ್ತಿಕೇಯ ಕ್ಷೇತ್ರದಿಂದ ರಿಪ್ಪನ್ಪೇಟೆ ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಕಾರ್ತಿಕೇಯ ಕಪ್-೨೦೨೧ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ.
ಕ್ರೀಡೆಗಳು ಸೋಲು ಗೆಲುವಿನ ಪಾಠವನ್ನು ಕಲಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಶಿಸ್ತಬದ್ಧ ಜೀವನವನ್ನು ರೂಪಿಸುತ್ತವೆ. ಕನ್ನಡ ಸಿನಿಮಾರಂಗದ ಮಹಾನ್ ಕಲಾವಿದ ಹಾಗೂ ಸಮಾಜ ಸೇವಕ ಪುನೀತ್ ರಾಜ್ಕುಮಾರ್ ಯುವಜನರಿಗೆ ಒಂದು ಆದರ್ಶವಾಗಿದ್ದಾರೆ. ಈ ಕಾರಣದಿಂದ ಈ ಗ್ರಾಮಾಂತರ ಪ್ರದೇಶದಲ್ಲಿ ಈ ಕ್ರಿಡಾಕೂಟ ಆಯೋಜಿಸಲಾಗಿದೆ ಎಂದು ಶ್ರೀಗಳು ಹೇಳಿದರು.
ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರ ದೇಗುಲದ ಧರ್ಮದರ್ಶಿಗಳಾದ ಡಾ.ಎಸ್.ರಾಮಪ್ಪ ಅವರು ಮಾತನಾಡಿ, ಪುನೀತ್ ರಾಜ್ ಕುಮಾರ್ರವರು ಕನ್ನಡ ಸಿನಿಮಾ ಜಗತ್ತಿನಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಒಂದು ಶಕ್ತಿಯಾಗಿದ್ದರು. ಅವರು ಮಾಡಿದ ಕೆಲಸ ಯುವಜನರಿಗೆ ಸ್ಫೂರ್ತಿದಾಯಕವಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಯುವಜನರು ಹೆಚ್ಚು ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗುವುದರಿಂದ ಆರೋಗ್ಯವಾಗಿ ಚಟುವಟಿಕೆಯಿಂದ ಇರಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹೊಸನಗರ ಎ ಪಿ ಎಂ ಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ರಾಮಚಂದ್ರ, ವಕೀಲರಾದ ಎನ್.ಪಿ.ಧರ್ಮರಾಜ್, ಬೆಳ್ಳೂರು ಗ್ರಾ.ಪಂ.ಅಧ್ಯಕ್ಷೆ ಭವಾನಿ ದಿವಾಕರ್,ರಾಜೇಶ್ ಬುಕ್ಕಿವರೆ,ವೀರೇಶ್, ರಘುಪತಿ,ಈಶ್ವರಪ್ಪ ಗೌಡ್ರು ಸೇರಿದಂತೆ ಅನೇಕ ಮುಖಂಡರು. ಕ್ಷೇತ್ರದ ಭಕ್ತರು ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ ಕ್ರೀಡಾ ತಂಡದವರು ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್