ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು.
ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ ಪುಸ್ತಕದ ಕಥೆಗಳು ಆಕರ್ಷಕವಾಗಿದ್ದು ಸರಳ ನಿರೂಪಣೆ ಹೊಂದಿದ್ದು ಕುತೂಹಲಕಾರಿ ತಿರುವಿನ ಘಟನೆ ಇದೆ ಎಂದು ತಿಳಿಸಿದ್ದಾರೆ.
ಇನ್ನೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಶೃಂಗೇಶ್, ಪ್ರಕಾಶ್ ಕುಗ್ವೆ ,ಶಿವಾನಂದ ಕಳವೆ,ನಾಗರಾಜ್ ತೋಂಬ್ರಿ ,ರೇವಣಪ್ಪ , ಕೆ, ನಾಗರಾಜ್ ಹಾಗೂ ಆನಂದಪುರದ ಸ್ಥಳೀಯ ಪತ್ರಕರ್ತರಿದ್ದರು.
ಇನ್ನೂ ಈ ಪುಸ್ತಕವು ಶಿವಮೊಗ್ಗದ ಡಯಾನಾ ಬುಕ್ ಹೌಸ್ ನಲ್ಲಿ
ಸಾಗರದ ರವೀಂದ್ರ ಪುಸ್ತಕಾಲಯ ದಲ್ಲಿ ಹಾಗೂ ಸಾಗರದ ಶ್ರೀ ಟ್ರೇಡರ್ಸ್ ಹಾಗೂ ಯಡೆಹಳ್ಳಿಯ ಮಲ್ಲಿಕಾ ವೆಜ್ ಹೋಟೆಲ್ ನಲ್ಲಿ ಸಿಗುತ್ತದೆಂದು ಬರಹಗಾರರಾದ ಕೆ, ಅರುಣ್ ಪ್ರಸಾದ್ ರವರು ಮಾಹಿತಿ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್