ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ
ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್ ಸೇರಿ ಎಲ್ಲಾ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದರು. ತೀರ್ಥಹಳ್ಳಿಯ ಬಿಜೆಪಿ ಕಾರ್ಯಾಲಯ  ಪ್ರೇರಣಾದಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಾಲೂಕು ಕಚೇರಿ ಎದುರು ರಸ್ತೆ ತಡೆ ನಡೆಸಿದರು.
ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಾಣಾಧಿಕಾರಿ ಲಕ್ಷ್ಮೀಪ್ರಸಾದ್ ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಇದರಲ್ಲಿ ಪೊಲೀಸರ ಕೈವಾಡವಿರುವುದು ತಿಳಿದು ಬಂದರೆ ಅವರನ್ನು ಕೆಲಸದಿಂದ ತೆಗೆದು ಹಾಕುತ್ತೇವೆ ಎಂದು ಭರವಸೆ ನೀಡಿದರು.

ಇನ್ನು ನಿನ್ನೆ ಭಜರಂಗದಳ ಕಾರ್ಯಕರ್ತರ ಮೇಲೆ ಗೋಕಳ್ಳರು ವಾಹನ ಹತ್ತಿಸಿದ್ದ ಪ್ರಕರಣದಲ್ಲಿ ಇಬ್ಬರೂ ಗಂಭೀರ ಸ್ಥಿತಿಯಲ್ಲಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಚೇತರಿಕೆ ಕಾಣುತ್ತಿದೆ ಎಂದು ತಿಳಿದು ಬಂದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

5 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

12 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago