ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಲ್ಲಿ ಇತಿಹಾಸದಲ್ಲೇ ಗೌರವಕ್ಕೆ ಪಾತ್ರವಾದಂತಹ ಸ್ಥಳ ಆನಂದಪುರ ಸಮೀಪದ ಮುರುಘಾಮಠ ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ ವಾಗಿ ಮುಂದುವರೆದ ಮಠಗಳಲ್ಲಿ ಒಂದಾಗಿದ್ದು ಕೆಳದಿ ಅರಸರ ಗೌರವ, ಪ್ರೀತಿ, ಪ್ರತಿಷ್ಠೆಗೆ ಪಾತ್ರವಾದಂತಹ ಮಠ ಇದಾಗಿದ್ದು ದಾನ ಧತ್ತಿಗಳನ್ನು ಪಡೆದುಕೊಂಡು ಬಂದಿದೆ.ಕಲೆ ಸಾಹಿತ್ಯ ಸಂಸ್ಕೃತಿಗೆ ತನ್ನದೇ ಆದಂತಹ ಪ್ರಾಮುಖ್ಯತೆ ನೀಡಿದ ಮಠ ಇದಾಗಿದೆ.
ಇದೇ ಡಿಸೆಂಬರ್ 4 ರ ಶನಿವಾರದಂದು ಪ್ರತಿವರ್ಷದಂತೆ ಈ ವರ್ಷವೂ ಕೂಡ ಮುರುಘಾ ಮಠದಲ್ಲಿ ಶರಣ ಸಾಹಿತ್ಯ ಮತ್ತು ಭಾವೈಕ್ಯ ಸಮ್ಮೇಳನ ಕಾರ್ತಿಕ ದೀಪೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲು ಸಮಿತಿಯವರು ನಿರ್ಧರಿಸಿದ್ದು ಬಂದಂತಹ ಭಕ್ತಗಣಕ್ಕೆ ವಿಶೇಷವಾದಂತಹ ಅನ್ನ ದಾಸೋಹವನ್ನು ಏರ್ಪಡಿಸಲಾಗಿದ್ದು ಈ ಬಾರಿ ಕೇವಲ 1 ದಿನಕ್ಕೆ ಈ ಸಮ್ಮೇಳನವನ್ನು ಅದ್ದೂರಿಯಾಗಿ ವಿಜೃಂಭಣೆಯಿಂದ ನೆರವೇರಿಸುವ ನಿರೀಕ್ಷೆ ಹೊಂದಿದ್ದೇವೆ ಎಂದು ಸಮಿತಿಯವರು ತಿಳಿಸಿದ್ದಾರೆ.
ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಹೃದಯ ತಪಾಸಣಾ ಶಿಬಿರ ಹಾಗೂ ಬಿಪಿ, ಶುಗರ್ ಮತ್ತು ಇಸಿಜಿ ತಪಾಸಣೆ ಯನ್ನು ಕೂಡ ಮಾಡಲಾಗುತ್ತಿದೆ.
ನಾಡಿನ ಮೂಲೆ ಮೂಲೆಯಿಂದ ಭಕ್ತಾದಿಗಳು ಆಗಮಿಸಿ ಈ ಸಮ್ಮೇಳನ ಜೊತೆಗೆ ಈ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಹಿತಿ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್