Headlines

ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ

ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಐದು ದಿನಗಳ ಹಿಂದೆ  ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ  ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು.
ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿ ಘಟನೆಯನ್ನು   ಖಂಡಿಸಿದ್ದವು ಹಾಗೂ ತಪ್ಪಿತಸ್ಥರ ವಿರುದ್ದ ತಲೆದಂಡ ಆಗಬೇಕೆಂದು ಆಗ್ರಹಿಸಿದ್ದರು.
ಇಲಾಖೆಯ ಮೇಲೆ ಸಾರ್ವಜನಿಕರಿಂದ ಹಾಗೂ ಗೃಹಸಚಿವರಿಂದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ತೀವ್ರ ಒತ್ತಡವಿತ್ತು. ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ಆಶ್ವಾಸನೆ ನೀಡಿದ್ದರು. ಅಂತೆಯೇ ಇಂದು ಶಿವಮೊಗ್ಗದ ಟಿಪ್ಪು ನಗರ ನಿವಾಸಿ ಅಪ್ರೋಜ್ ಹಾಗೂ ಇರ್ಫಾನ್ ಎಂಬ ಇಬ್ಬರು ಆರೋಪಿಗಳನ್ನು ಹಾಗೂ ಅವರ ಬಳಿಯಿದ್ದ ಸ್ಯಾಂಟ್ರೋ ಕಾರನ್ನು ಮಾಳೂರು ಸಬ್ ಇನ್ಸ್ಪೆಕ್ಟರ್ ಜಯಪ್ಪ ನಾಯಕ ಅವರ ನೇತೃತ್ವದಲ್ಲಿ ಪೊಲೀಸರು ವಶ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *