ದನಗಳ್ಳರಿಗೆ ಸಹಕರಿಸುವ ಪೊಲೀಸರ ವಿರುದ್ದ ಕಿಡಿಕಾರಿದ ಗೃಹ ಸಚಿವ ಆರಗ ಜ್ಞಾನೇಂದ್ರ :ಸ್ವಪಕ್ಷದ ಕಾರ್ಯಕರ್ತರಿಂದಲೇ ವೈರಲ್ ಆಯ್ತಾ ವಿಡಿಯೋ :

ಕರ್ನಾಟಕ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ತಮ್ಮ ನಿವಾಸದ ಕಚೇರಿಯಿಂದ ಪಕ್ಷದ ಕಾರ್ಯಕರ್ತರ ಎದುರಲ್ಲೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ದನಕಳ್ಳತನದ ಬಗ್ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ಪೊಲೀಸರಿಗೆ ಸರ್ಕಾರದಿಂದ ಕೈ ತುಂಬಾ ಸಂಬಳ ಕೊಡಲಾಗಿದೆ. ಆದರೂ ನಾಯಿ ಎಂಜಲು ಕಾಸನ್ನು ತಿಂದು ಹಾಗೆ ಬಿದ್ದಿರ್ತಾರೆ. ಯೋಗ್ಯತೆ ಇಲ್ಲವೆಂದರೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ. ಮಣ್ಣು ಹೊರಲಿ ಎಂದು ಕೂಗಾಡಿದ್ದಾರೆ.
ಪ್ರತಿನಿತ್ಯ ಗೋವು ಸಾಗಾಟ ಮಾಡುವವರು ಯಾರೆಂದು ಪೊಲೀಸರಿಗೆ. ಆದರೂ ಲಂಚ ತಿಂದು ನಾಯಿಯಂತೆ ಬಿದ್ದಿರುತ್ತಾರೆ. ಪೊಲೀಸರಿಗೆ ಆತ್ಮಗೌರವ ಬೇಡವಾ..? ಗೃಹ ಸಚಿವನಾಗಿ ನಾನು ಇರಬೇಕಾ ಬೇಡ್ವಾ..? ಎಲ್ಲಾ ಕೆಟ್ಟು ಹಾಳಾಗಿ ಹೋಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಗೋವಿನ ಪ್ರಕರಣದಲ್ಲಿ ಆರೋಪಿಗಳು ಬಂಧನವಾಗ್ತಿದ್ದ ಹಾಗೆ ಎಲ್ಲವೂ ತಣ್ಣಗಾಗಿದ್ರೆ..ಎಲ್ಲವೂ ಸರಿಯಾಗಿರ್ತಿತ್ತು.ಆದ್ರೆ ತೀರ್ಥಹಳ್ಳಿಯ ಹಿಂದುಪರ ಸಂಘಟನೆಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತೀರ್ಥಹಳ್ಳಿಯ ಅಜಾದ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು. ಪೊಲೀಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆಯಲ್ಲಿ ಬಿಜೆಪಿಯ ಮುಖಂಡರುಗಳು ಭಾಗವಹಿಸಿದ್ರು. ಪೊಲೀಸ್ ವ್ಯವಸ್ಥೆ ಬಗ್ಗೆ ಹಿಂದುಪರ ಸಂಘಟನೆಗಳು ಪ್ರಶ್ನೆ ಮಾಡಿದ್ದು, ಖುದ್ದು ಆರಗಾ ಜ್ಞಾನೇಂದ್ರರನ್ನೇ ಪ್ರಶ್ನೆ ಮಾಡಿದಂತಾಗಿದೆ. ಗೃಹ ಸಚಿವರ ಕ್ಷೇತ್ರದಲ್ಲಿಯೇ ಬಿಜೆಪಿಯ ಅಂಗವಾಗಿರುವ ಸಂಘಟನೆಗಳು ಪ್ರತಿಭಟನೆಗಿಳಿದ್ರೆ..,ಸಹಜವಾಗಿಯೇ ಕುತುಹಲಕ್ಕೆ ಎಡೆಮಾಡಿಕೊಟ್ಟಿದೆ.

ಈ ಬೆಳವಣಿಗೆಯನ್ನು ಪ್ರತಿಪಕ್ಷ ಕಾಂಗ್ರೇಸ್ ರಾಜಕೀಯ ಅಸ್ತ್ರವಾಗಿ ಪ್ರಯೋಗಿಸಿದ್ರೂ ಅಚ್ಚರಿಯಿಲ್ಲ. ಇದು ಆರಗಾ ಜ್ಞಾನೇಂದ್ರರನ್ನು ಕೆರಳಿಸಿರುವುದಂತೂ ಸುಳ್ಳಲ್ಲ.

ತೀರ್ಥಹಳ್ಳಿಯ ಗೋವಿನ ಪ್ರಕರಣದ ನಂತರ ಚಿಕ್ಕಮಗಳೂರು ಜಿಲ್ಲೆಯಲ್ಲೂ ಗೋವಿನ ಕಳ್ಳತನ ಪ್ರಕರಣಗಳು ನಡೆದಾಗ ಸಹಜವಾಗಿಯೇ ಗೃಹ ಸಚಿವರು ಪೊಲೀಸರ ಮೇಲೆ ಉಗ್ರ ರೂಪ ತಾಳಿದ್ದಾರೆ. ಗುಡ್ಡೆಕೊಪ್ಪದ ತಮ್ಮ ಮನೆಯಲ್ಲಿ ಪೊಲೀಸರಿಗೆ ತರಾಟೆ ತೆಗೆಯುವಾಗ ಯಾರೋ ಕಾರ್ಯಕರ್ತರೋ,,ಅಥವಾ ಗೃಹ ಸಚಿವರ ಭೇಟಿಗೆ ಬಂದವರೋ ಗೊತ್ತಿಲ್ಲ..ಆರಗಾ ಬೈಗುಳವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋದಲ್ಲಿ ಗೃಹ ಸಚಿವರು ಬೈಯ್ಯುವ ಪರಿ ಎಂತವರನ್ನು ಅಚ್ಚರಿಗೊಳಿಸುತ್ತೆ.


ಈ ಆಡಿಯೋ ವೈರಲ್ ಆಗುತ್ತಾ ಎಚ್ಚೆತ್ತ ಗೃಹ ಸಚಿವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾರೆ, ನಾನು ಎಲ್ಲ ಪೊಲೀಸರ ವಿರುದ್ಧ ಮಾತನಾಡಿಲ್ಲ. ಗೋ ಕಳ್ಳರಿಗೆ ಬೆಂಬಲ ನೀಡುವ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಕಳ್ಳರನ್ನು ಹಿಡಿಯಲು ಹೋದವರ ಮೇಲೆಯೇ ಕಾರು ಹತ್ತಿಸಲಾದ. ಇದರಿಂದ ಗಂಭೀರ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯಿಂದ ನನಗೆ ಬೇಸರವಾಗಿದೆ. ಪೊಲೀಸರ ಬಗ್ಗೆ ನನಗೆ ಗೌರವ ಇದೆ. ಎಲ್ಲಾ ಒಂದೇ ರೀತಿ ಇರುವುದಿಲ್ಲ. ಕರ್ನಾಟಕದಲ್ಲಿ ದಕ್ಷ ಪೊಲೀಸರೂ ಇದ್ದಾರೆ ಎಂದು ಹೇಳಿದ್ದಾರೆ.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

5 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago