ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು.
ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ.
ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ :
ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್ ಅವರ ನಾಮಫಲಕಕ್ಕೆ ಬಿಳಿ ಬಣ್ಣ ಹಚ್ಚುವುದು ಮೂಲಕ ಅವಮಾನ ಮಾಡಿರುವವರ ವಿರುದ್ಧ ಕನ್ನಡಪರ ಸಂಘಟನೆಗಳು ಮತ್ತು ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಿನಿಮಾರಂಗದಲ್ಲಿ ಅಭಿನಯಿಸುವುದರ ಮೂಲಕ ಕೋಟ್ಯಾಂತರ ಜನಗಳ ಅಭಿಮಾನವನ್ನು ಹೊಂದಿದ್ದ ಪುನೀತ್ ರಾಜ್ ಕುಮಾರ್ ಅವರು ಯಾವುದೇ ಪ್ರಚಾರವಿಲ್ಲದೆ ಜನಸೇವೆಯನ್ನು ಮಾಡುವುದರ ಮೂಲಕ ಕನ್ನಡ ನಾಡಿನ ಜನತೆಯ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ನಾಮ ಫಲಕಕ್ಕೆ ಬಣ್ಣ ಹಚ್ಚಿ ಹೆಸರು ಅಳಿಸಿರುವ ಕಿಡಿಗೇಡಿಗಳು ಬಗ್ಗೆ ರಕ್ಷಣಾ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಹಾಗೆ ಅವರುಗಳನ್ನು ಬಂಧಿಸಬೇಕು ಎಂದು ಕನ್ನಡಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್