ಶಿವಮೊಗ್ಗ : ಕಾನೂನು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು 20 ವಿದ್ಯಾರ್ಥಿಗಳು ಪರೀಕ್ಷೆ ವಿರೋಧಿಸಿ ಪ್ರತಿಭಟಿಸಿದರು.
ಎಟಿಎನ್ ಸಿಸಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆಗೆ ಅವಕಾಶವಿದೆ. ಆದರೆ ಈ ಆನ್ ಲೈನ್ ನ್ನ ವಿಶ್ವವಿದ್ಯಾಲಯ ರದ್ದುಪಡಿಸಿ ಆಫ್ ಲೈನ್ ನಲ್ಲಿ ಮಾತ್ರ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ.
ಪಿಯುಸಿ ನಂತರದ ಕಾನೂನು ವಿದ್ಯಾರ್ಥಿಗಳಿಗೆ 5 ವರ್ಷ ಕಾನೂನು ಅಭ್ಯಸಿಸುವ ಅವಕಾಶವಿದೆ. ಅದರಂತೆ ಪದವಿ ಅಭ್ಯಾಸಿಸುವ ವಿದ್ಯಾರ್ಥಿಗಳು ಕಾನೂನು ಓದಲು ಅವಕಾಶವಿದೆ. ಆದರೆ ಪಿಯುಸಿ ನಂತರ ಅಭ್ಯಾಸಿಸುವ ಕಾನೂನು ವಿದ್ಯಾರ್ಥಿಗಳಿಗೆ ಮೂರು ವರ್ಷ ಕೊರೋನ ಹಿನ್ನಲೆಯಲ್ಲಿ ಪ್ರಮೋಟ್ ಮಾಡಲಾಗಿದೆ.
ಆದರೆ ಪದವಿ ನಂತರ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಮೋಟ್ ಮಾಡದೆ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ 20 ಕ್ಕೂ ಹೆಚ್ವುಜನ ವಿದ್ಯಾರ್ಥಿಗಳು ಹಾಲ್ ಟಿಕೇಟ್ ಹರಿದು ಪ್ರತಿಭಟಿಸಿದರು.
ಈ ಕುರಿತು ನ್ಯಾಯಾಲಯದಲ್ಲಿ ಪ್ರಕರಣದ ತೀರ್ಪು ಇಂದು ಮಧ್ಯಾಹ್ನ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಆದರೆ ನ್ಯಾಯಾಲಯದ ತೀರ್ಪು ಪ್ರಕಟಗೊಳಿಸುವ ಮೊದಲು ಪರೀಕ್ಷೆ ನಡೆಸಿರುವುದು ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಈ ಸಂದರ್ಭದಲ್ಲಿ ಸಿಎಂ ಚಿನ್ಮಯ್,ನಂದೀಶ್,ದುಷ್ಯಂತ,ರಶ್ಮಿ,
ಯಶಸ್ವಿನಿ,ಮಾನಸ,ಗೌತಮ್ ಹಾಗೂ ಹಲವು ವಿದ್ಯಾರ್ಥಿಗಳು ಉಪಸ್ಥಿತಿ ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್