ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ ಮುಂದೆಯೇ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ ಆತನಿಂದ ಹಿಂದೆ ಸರಿದ್ದಿದ್ದಾಳೆ.
ಎಂ ಕಾಂ ವಿದ್ಯಾಭ್ಯಾಸ ಮುಗಿಸಿದ್ದ ಯುವತಿ ಕ್ರಮೇಣ ಯುವಕನೊಂದಿಗೆ ಓಡಾಟದಿಂದ ಹಿಂದೆ ಸರಿದ ಪರಿಣಾಮ ಯುವಕನಿಗೆ ಯುವತಿಯ ನಡುವಳಿಕೆಯಿಂದ ಗೊಂದಲ ಉಂಟಾಗಿದೆ. ಡಿ.10 ರಂದು ಯುವತಿಯ ಮನೆಯ ಬಳಿ ಬಂದ ಮಂಜುನಾಥ್ ವಿಷ ಕುಡಿಯಲು ಮುಂದಾಗಿದ್ದಾನೆ.
ಮಂಜುನಾಥ್ ತನ್ನ ಅಪ್ಪ ಅಮ್ಮನಿಗೆ ಪೀಡಿಸಿ ಇದ್ದ ಜಮೀನನ್ನು ಮಾರಿಸಿ ಅದರಲ್ಲಿ ಬಂದ 6 ಲಕ್ಷ ಹಣದೊಂದಿಗೆ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ. ವಿಶೇಷವೆಂದರೆ ತನ್ನ ಬೈಕನ್ನ ತಾನು ಕೆಲಸ ಮಾಡುತ್ತಿದ್ದ ಆಫೀಸಿನ ಎದುರು ನಿಲ್ಲಿಸಿ, ಪೋನನ್ನು ಸ್ವಿಚ್ ಆಫ್ ಮಾಡಿದ್ದ, ಊರವರು ಈತ ಎಲ್ಲೋ ಸತ್ತು ಹೋಗಿದ್ದಾನೆ ಅಂದುಕೊಂಡಿದ್ರು. ಈಗ ಹುಡುಗಿ ಮನೆಯಲ್ಲೇ ವಿಷ ಕುಡಿದು ಆಸ್ಪತ್ರೆ ಸೇರಿದ್ದಾನೆ.
112 ಕ್ಕೆ ಕರೆ ಮಾಡಿದ ಪರಿಣಾಮ ಆತನನ್ನ ಕರೆದುಕೊಂಡು ಬಂದು ಮೆಗ್ಗಾನ್ ಗೆ ದಾಖಲಿಸಲಾಗಿದೆ. ಇತ್ತ ಯುವತಿಯ ತಾಯಿ ಯುವಕನ ವಿರುದ್ಧ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರತಿದಿನ ಬಂದು ಯುವಕ ಕುಡಿದು ಗಲಾಟೆ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್