ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಹರಿಹಾಯ್ದ ಶಾಸಕ ಹರತಾಳು ಹಾಲಪ್ಪ :

ಸಾಗರ : ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ನನ್ನನ್ನು ವಲಸಿಗ ಎಂದು ಟೀಕೆ ಮಾಡಿದ್ದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ. ರಾಜಕಾರಣದಲ್ಲಿ ವಲಸೆ ಸಹಜ. ಕಾಂಗ್ರೇಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಕೇರಳಕ್ಕೆ ಬಂದಿದ್ದು, ಡಿ.ಕೆ.ಶಿವಕುಮಾರ್ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದು, ಸಿದ್ದರಾಮಯ್ಯ ಬಾದಮಿಯಿಂದ ಸ್ಪರ್ಧೆ ಮಾಡಿದ್ದು ವಲಸೆ ರಾಜಕಾರಣವಲ್ಲವೇ ಎಂದು ಬೇಳೂರಿಗೆ ಟಾಂಗ್ ನೀಡಿದ ಹಾಲಪ್ಪ, ನಮ್ಮ ಪಕ್ಷದಲ್ಲೂ ಸಹ ತಮ್ಮ ಕ್ಷೇತ್ರ ಬಿಟ್ಟು ಮತ್ತೊಂದು ಕಡೆ ಹೋಗಿ ಸ್ಪರ್ಧೆ ಮಾಡಿದ ಉದಾಹರಣೆ ಇದೆ. ಮಾಜಿ ಶಾಸಕರು ಬಿಜೆಪಿಯಲ್ಲೂ ಸೊನ್ನೆಯಾಗಿದ್ದರೂ, ಈಗ ಕಾಂಗ್ರೇಸ್‍ನಲ್ಲೂ ಸೊನ್ನೆಯಾಗಿದ್ದಾರೆ. ಇದೀಗ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಿಂದ ಅವರಿಗೆ ಟಿಕೇಟ್ ಸಿಗುವುದೇ ಅನುಮಾನ. ಇಷ್ಟು ವರ್ಷಗಳ ಕಾಲ ಸ್ವಂತ ಮನೆ ಮಾಡದೆ ಐ.ಬಿ.ಯಲ್ಲಿ ವಾಸವಿದ್ದ ಬೇಳೂರು ಈಗ ಗಾಂಧಿನಗರದಲ್ಲಿ ಮನೆ ಮಾಡಿಕೊಂಡು ಹಂದಿ ಕಾಟ ಎಂದು ಹೇಳುತ್ತಿದ್ದಾರೆ. ಒಂದರ್ಥದಲ್ಲಿ ಮಾಜಿ ಶಾಸಕರದ್ದು ಹತಾಶ ರಾಜಕಾರಣ ಎಂದು ಹೇಳಿದರು.

ನಾನು ವಿದ್ಯಾಭ್ಯಾಸ ಸಂದರ್ಭದಿಂದಲೂ ಸಾಗರ ಕ್ಷೇತ್ರವ್ಯಾಪ್ತಿಯಲ್ಲೇ ವಾಸ ಮಾಡುತ್ತಿದ್ದೇನೆ. ಹರತಾಳು ಗ್ರಾಮದಲ್ಲಿ ನನ್ನ ಮನೆ ಇದೆ. ನಾನು ಚುನಾವಣೆಗೆ ನಿಲ್ಲುವ ಮೊದಲು ಸಾಗರದಲ್ಲಿ ಮನೆ ಮಾಡಿದ್ದೇನೆ. ಮಾಜಿ ಶಾಸಕರು ಇಷ್ಟು ದಿನ ಐ.ಬಿ.ಯ ಖಾಯಂ ನಿವಾಸಿ. ಈಗ ಯಾರೋ ಸಲಹೆ ನೀಡಿದ್ದಾರೆಂದು ಮನೆ ಮಾಡಿದ್ದಾರೆ. ನಾನು ವಲಸೆ ಹೋಗು ಸಂದರ್ಭದಲ್ಲಿ ವಲಸೆ ಹೋಗುತ್ತೇನೆ. ಇನ್ನು ಮುಂದೆ ಎಲ್ಲಿಯೂ ವಲಸೆ ಹೋಗುವುದಿಲ್ಲ. ಸಾಗರ ಕ್ಷೇತ್ರದಲ್ಲಿಯೆ ಇದ್ದು ರಾಜಕಾರಣ ಮಾಡುತ್ತೇನೆ ಎಂದು ತಿಳಿಸಿದರು.

ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಿಟ್ಟಿದ್ದು ರಿಪೇರಿ ಅಂಬ್ಯುಲೆನ್ಸ್ ಎಂದು ನಾನು ಸ್ಪಷ್ಟಪಡಿಸಿದ್ದೇನೆ. ಹೊಸ ಅಂಬ್ಯುಲೆನ್ಸ್ ಇನ್ನು ಎರಡು ತಿಂಗಳಿನಲ್ಲಿ ಬಿಡಲಾಗುತ್ತದೆ. ಭಾನುವಾರ ತುಮರಿಗೆ ಧಾರ್ಮಿಕ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಹೋಗಿದ್ದಾಗ ಮೃತ ವ್ಯಕ್ತಿಯ ಮನೆಗೆ ಹೋಗಲು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಭೇಟಿ ನೀಡಿ ಸಾಂತ್ವಾನ ಹೇಳಲಾಗುತ್ತದೆ. ಮಾಜಿ ಶಾಸಕರು ಸೊರಬ ರಸ್ತೆ ಅಗಲೀಕರಣಕ್ಕೆ 20 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಹಾಗಾದರೆ ಬಿಡುಗಡೆಯಾದ 20 ಕೋಟಿ ರೂ. ಎಲ್ಲಿ ಹೋಯಿತು. ಹಿಂದೆ ಹೈದರಬಾದ್, ಗೋವಾ ರೆಸಾರ್ಟ್‍ಗೆ ಹೋದಾಗ ಖಾಲಿ ಮಾಡಿಕೊಂಡಿದ್ದಾರಾ ಎನ್ನುವುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಲಿ ಎಂದ ಅವರು, ನಮ್ಮ ಕಾರ್ಯಕರ್ತರು ಸೊರಬ ರಸ್ತೆಯ ನಿವಾಸಿಗಳ ಬಳಿ ರೌಡಿಸಂ ಮಾಡಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ, ತಪ್ಪಿತಸ್ತರ ವಿರುದ್ದ ಎಫ್.ಐ.ಆರ್. ದಾಖಲು ಮಾಡಿಸುತ್ತೇನೆ ಎಂದು ಹೇಳಿದರು.

ಗೋಷ್ಟಿಯಲ್ಲಿ ಕೆಳದಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ್ ಮಾತನಾಡಿದರು. ದೇವೇಂದ್ರಪ್ಪ, ಬಿ.ಟಿ.ರವೀಂದ್ರ,ಗಿರೀಶ್ ಗೌಡ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

10 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

10 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

11 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

18 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

22 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

22 hours ago