ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ.
ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.
ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ ಮಕ್ಕಳು ಹಾಗೂ ಮಹಿಳೆಯರಿಗೆ ಗುಣಮಟ್ಟದ ಆರೋಗ್ಯ ಕಾಳಜಿ ಸೇವೆಯು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ರಿಪ್ಪನ್ ಪೇಟೆಯಲ್ಲಿ ಧನ್ವಂತರಿ ಕ್ಲಿನಿಕ್ ನ್ನು ಆರಂಭಿಸಲಾಗಿದೆ ಎಂದು ವೈದ್ಯರಾದ ಡಾ ಗಾನವಿ ಕೆ ಟಿ ತಿಳಿಸಿದ್ದಾರೆ.
ಇಂದಿನ ಅನಿಶ್ಚಿತ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತಮ ಆರೋಗ್ಯ ಕಾಳಜಿ ಸೇವೆಯನ್ನು ಪಡೆಯುವುದು ಬಹುಮುಖ್ಯ ಅಗತ್ಯವಾಗಿದ್ದು, ಈ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ನಮ್ಮ ಈ ನೂತನ ಧನ್ವಂತರಿ ಕ್ಲಿನಿಕ್ ಬಹುಮುಖ್ಯ ಪಾತ್ರವನ್ನು ನಿರ್ವಹಿಸಲಿದೆ. ಈ ಮೂಲಕ ರಿಪ್ಪನ್ ಪೇಟೆ ಭಾಗದ ಜನತೆ ಗುಣಮಟ್ಟದ ಚಿಕಿತ್ಸೆಗಾಗಿ ಜಿಲ್ಲೆಯ ಕೇಂದ್ರ ಸ್ಥಾನಕ್ಕೆ ಪ್ರಯಾಣಿಸುವ ಅನಿವಾರ್ಯತೆ ತಪ್ಪಲಿದ್ದು, ರಿಪ್ಪನ್ ಪೇಟೆ ಪಟ್ಟಣದಲ್ಲಿಯೇ ಮಲ್ಟಿ ಡಿಸಿಪ್ಲಿನರಿ ಆರೋಗ್ಯ ಸೇವೆಗಳು ಲಭ್ಯವಾಗಲಿವೆ,” ಎಂದು ಹೇಳಿದರು.
ಧನ್ವಂತರಿ ಕ್ಲಿನಿಕ್ ನ ವೈದ್ಯರಾದ ಡಾ ಗಾನವಿ ಕೆ ಟಿ ರವರು ಮೂಲತಃ ರಿಪ್ಪನ್ ಪೇಟೆ ಸಮೀಪದ ಕಲ್ಲೂರು ಗ್ರಾಮದವರು ಇವರು ಶಿವಮೊಗ್ಗದ ಪ್ರಖ್ಯಾತ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಇದರ ಜೊತೆಯಲ್ಲಿಯೇ ರಿಪ್ಪನ್ ಪೇಟೆಯ ಸಹಕಾರಿ ಧುರೀಣ ಎಂಎಂ ಪರಮೇಶ್ ರವರ ಒಡೆತನದ ಪರಮೇಶ್ ಮೆಡಿಕಲ್ ಕೂಡ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್