ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ.
ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!!
ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಕನೆಕ್ಷನ್ ಇಲ್ಲದೆ ವೈರ್ ಗಳು ಹಾಗೂ ಕ್ಯಾಮೆರಾಗಳು ನೇತಾಡುತ್ತಿವೆ.
ರಿಪ್ಪನ್ ಪೇಟೆಯಲ್ಲಿ ಹಲವಾರು ತಿಂಗಳುಗಳಿಂದ ಅನೇಕ ಅಪರಾಧ ಪ್ರಕರಣಗಳು ನಡೆದರು ಸಹ ಸಿಸಿ ಕ್ಯಾಮೆರಾ ಸರಿ ಇಲ್ಲದೇ ಇರುವುದರಿಂದ ಅನೇಕ ಪ್ರಕರಣಗಳು ಮುಚ್ವಿಹೋಗಿವೆ.ಇಲ್ಲಿನ ಸಿಸಿ ಕ್ಯಾಮೆರಾದ ಈ ದುಸ್ಥಿತಿಯಿಂದ ಹಲವಾರು ಪ್ರಕರಣಗಳಲ್ಲಿ ಬೇಕಾದ ವೀಡಿಯೋ ತುಣುಕುಗಳಿಗಾಗಿ ಖಾಸಗಿ ವ್ಯಕ್ತಿಗಳ ಮೊರೆ ಹೋಗುತ್ತಿರುವುದು ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕನ್ನಡಿಯಾಗಿದೆ.
ಮೊದಲು ಅಕ್ರಮ ಮರಳು ಸಾಗಾಣಿಕೆ, ಅಕ್ರಮ ಗೋ ಸಾಗಾಣಿಕೆ ಹಾಗೂ ಅಪಘಾತ ದೃಶ್ಯಗಳು ಈ ಸಿಸಿ ಕ್ಯಾಮೆರದಲ್ಲಿ ಬಹಳ ಚೆನ್ನಾಗಿ ಸೆರೆಯಾಗುತ್ತಿತ್ತು.ಆದರೆ ಕಳೆದ ಹಲವು ದಿನಗಳಿಂದ ಈ ಸಿಸಿ ಕ್ಯಾಮೆರಾ ಕನೆಕ್ಷನ್ ಇಲ್ಲದೆ ಹಾಳಾಗಿದ್ದು ಅವಶ್ಯಕತೆಗೆ ಬೇಕಾದ ವೀಡಿಯೋ ತುಣುಕನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಇನ್ನಾದರೂ ಕೂಡ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಸಿಸಿ ಕ್ಯಾಮೆರಾ ಸರಿ ಮಾಡಲಿ ಎಂಬುದೇ ಪೋಸ್ಟ್ ಮ್ಯಾನ್ ನ್ಯೂಸ್ ನ ಆಶಯ.
ಗಮನ ಹರಿಸ ಬೇಕಾದ ಅಧಿಕಾರಿಗಳು ಮೌನವಾಗಿದ್ದಾರೆ.ಗಂಭೀರ ಸಮಸ್ಯೆ ಉಧ್ಬವಿಸಿದಲ್ಲಿ ಕಾರಣರಾರು ? ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ.ಇನ್ನಾದರೂ ಎಚ್ಚೆತ್ತುಕೊಳ್ಳುವವರೆ ಎಂದು ಕಾದು ನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್