ರಿಪ್ಪನ್ಪೇಟೆ: ಸಮೀಪದ ಗರ್ತಿಕೆರೆಯಲ್ಲಿ ಬುಧವಾರ ರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೋರ್ವ ಕೊಲೆಯಾಗಿ ಕೆರೆಯಲ್ಲಿ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಗರ್ತಿಕೆರೆ ಗ್ರಾಮದ ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ, ಗರ್ತಿಕೆರೆಯ ಕೋಳಿ ಪಯಾಜ್,ಗರ್ತಿಕೆರೆಯ ಕೃಷ್ಣ ಎಂಬ ಸ್ನೇಹಿತರುಗಳು ಸೇರಿ ಬುಧವಾರ ತಡರಾತ್ರಿ ಸತೀಶ್ ಶೆಟ್ಟಿಯ ಮನೆಯಲ್ಲಿ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾರೆ.
ನಂತರ ಮೂವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿದಂತೆ ಜಗಳವಾಗಿ ಕೋಳಿ ಪಯಾಜ್ ಹಾಗೂ ಕೃಷ್ಣ ಸೇರಿ ಮಾರಕಾಸ್ತ್ರಗಳಿಂದ ಸತೀಶ್ ಶೆಟ್ಟಿ (53)ಯನ್ನು ಕೊಲೆ ಮಾಡಿ ಗರ್ತಿಕೆರೆ ಮೂಲ ಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಸಮೀಪದಲ್ಲಿರುವ ಕೆರೆಗೆ ಶವನ್ನು ಬಿಸಾಡಿ ಹೋಗಿದ್ದರು.
ವಿಷಯ ತಿಳಿದ ಗ್ರಾಮಸ್ಥರು ಆರೋಪಿ ಕೋಳಿ ಪಯಾಜ್ ನನ್ನು ಇಂದು ಹಿಡಿದು ಸರಿಯಾಗಿ ರಿಪೇರಿ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೋರ್ವ ಆರೋಪಿ ಕೃಷ್ಣ ನಾಪತ್ತೆಯಾಗಿದ್ದು ಪೊಲೀಸರು ಹಾಗೂ ಗ್ರಾಮಸ್ಥರು ಈತನ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.
ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇👇