ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.
ಈ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ ಸೆಳೆದ ಉರಿ ಸರ್ಜಿಕಲ್ ಸ್ಟ್ರೈಕ್ ಮುನ್ನಡೆಸಿದ್ದನ್ನು ದೇಶದ ಜನ ಮರೆಯಲಾರರು ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್, ಮಹಾಲಕ್ಷ್ಮಿ ಅಣ್ಣಪ್ಪ,ಬೆಳ್ಳೂರು ತಿಮ್ಮಪ್ಪ ,ಸುರೇಶ್ ಸಿಂಗ್, ಎನ್. ಸತೀಶ್,ಸುಧೀಂದ್ರ ಪೂಜಾರಿ,ಕಗ್ಗಲಿ ಲಿಂಗಪ್ಪ ,ಕೀರ್ತಿ ಗೌಡ ಕುಕ್ಕಳಲೆ, ಮಲ್ಲಿಕಾರ್ಜುನ್ ಜಿ.ಡಿ, ನಾಗರತ್ನ ದೇವರಾಜ್, ದೀಪಾ ಸುಧೀರ್, ರಾಘವೇಂದ್ರ, ಉಮಾ ಸುರೇಶ್, ಅಶ್ವಿನಿ ರವಿಶಂಕರ್, ವಿನೋದಮ್ಮ ಮತ್ತಿತರರು ಉಪಸ್ಥಿತರಿದ್ದರು.