ವಲಸೆ ಬಂದು ಹೋಗುವ ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಏನು ಗೊತ್ತು : ಬೇಳೂರು ಗೋಪಾಲಕೃಷ್ಣ

ಸಾಗರ. ಇಂದು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ  ಸಾಗರದ ಮಾಜಿ ಶಾಸಕರಾದ ಗೋಪಾಲ ಕೃಷ್ಣ ಬೇಳೂರು  ಶಾಸಕ ಹಾಲಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ

ಶಾಸಕ ಹಾಲಪ್ಪ ತುಮರಿ ಭಾಗದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ರಿಕೇಟ್ ನೋಡುತ್ತ ಕುಳಿತ ಶಾಸಕ ಹಾಲಪ್ಪ ಸರಿಯಾದ ಸಮಯಕ್ಕೆ ತುಮರಿ ಗ್ರಾಮಕ್ಕೆ ಹೋಗಿದ್ದರೆ ಎರಡು ಜೀವ ಉಳಿಯುತ್ತಿತ್ತು ಇವರಿಗೆ ಎರಡು ಜೀವಕ್ಕಿಂತ ಕ್ರಿಕೆಟ್ ನೋಡುವುದೆ ಮುಖ್ಯವಾಗಿದೆ.

ಆಕ್ಸಿಜನ್ ವ್ಯವಸ್ಥೆ ಇಲ್ಲದ ಸೆಕೆಂಡ್ ಹ್ಯಾಂಡ್ ಆಂಬುಲೆನ್ಸ್ ನೀಡಿ ಪ್ರಚಾರಕ್ಕಾಗಿ ನಗರಸಭೆಯಲ್ಲಿ ಸಮಾರಂಭ ಮಾಡಿದ್ದಾರೆ.ಅಂಬುಲೆನ್ಸ್’ನಲ್ಲಿ ಆಕ್ಸಿಜನ್ ಇಲ್ಲ. ಇದು ಜನರ ಜೀವ ಹೇಗೆ ಉಳಿಸುತ್ತದೆ ಎಂದರು.


ಸೊರಬ ರಸ್ತೆ ಅಗಲೀಕರಣಕ್ಕೆ ಪ್ರಾರಂಭದಲ್ಲಿ 20ಕೋಟಿ ತಂದವನೇ ನಾನು, ನಂತರದಲ್ಲಿ ಯೋಜನಾ ವೆಚ್ಷ ಹೆಚ್ಚಿದೆ. ಶಾಸಕರ ರೌಡಿ ಪಟಾಲಂ ಜಾಗವನ್ನು ಬೇಗ ಬಿಟ್ಟು ಕೊಡಬೇಕು ಎಂದು ಆ ಭಾಗದ ಹಲವರನ್ನು ಹೆದರಿಸಿದ್ದಾರೆ. ಈ ಕಾರಣಕ್ಕಾಗಿ ಅಲ್ಲಿನ ಜನ ಬೇಸರಗೊಂಡು ನ್ಯಾಯಾಲಕ್ಕೆ ಹೋಗಿದ್ದಾರೆ. ಬೆದರಿಸಿರುವ ವಿಡಿಯೋ ತುಣುಕುಗಳು ನಮ್ಮ ಬಳಿ ಇದೆ ಎಂದು ಹೇಳಿದರು.

ಸಾಗರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ಹದಗೆಟ್ಟಿದೆ. ಸ್ವಚ್ಚತೆಗೆ ಗಮನ ನೀಡುತ್ತಿಲ್ಲ.ಒಂದು ವರ್ಷದಲ್ಲಿ ನಗರಸಭೆ ಆಡಳಿತ ಸಂಪೂರ್ಣ ವಿಫಲವಾಗಿದೆ.ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಮತ್ತು ಜವಾಬ್ದಾರಿ ಇಲ್ಲ, ಅವರು ಬಂದು ಹೋಗುವ ವಲಸೆ ಶಾಸಕರು ಎಂದು ಗಂಭೀರ ಆರೋಪ  ಮಾಡಿದ್ದಾರೆ.

ಗೋಷ್ಟಿಯಲ್ಲಿ ನಗರ ಕಾಂಗ್ರೆಸ್‌ ಅಧ್ಯಕ್ಷ ಸುರೇಶ್’ಬಾಬು,ಮಾಜಿ ತಾಪಂ ಸದಸ್ಯ ಸೋಮಶೇಖರ್ ಲಾವಿಗೇರಿ,ನಗರಸಭೆ ವಿರೋಧ ಪಕ್ಷದ ನಾಯಕ  ಮಂಡಗಳಲೆ ಗಣಪತಿ ತಾರಮೂರ್ತಿ, ಗಲ್ಲಿ ವೆಂಕಟೇಶ, ನಗರಸಭೆ ಸದಸ್ಯೆ ಮಧುಮಾಲತಿ ,ಅಶೋಕ್ ಬೇಳೂರು, ರಮೇಶ ಚಂದ್ರಗುತ್ತಿ, ಐ.ಜಿ.‌ಸ್ವರೂಪ್  ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago