ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ.
ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ.
ನಗರದ ಕೆಲವು ಲಾಡ್ಜ್ ನಲ್ಲಿ ಯುವಕ ಯುವತಿಯರು ಅನೈತಿಕ ಚಟುವಟಿಕೆ ಹಿನ್ನಲೆಯಲ್ಲಿ ಲಾಡ್ಜ್ ಮಾಡಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಲಾಡ್ಜ್ ಗಳ ತಪಾಸಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ ಎನ್ನಲಾಗಿದೆ.
ನಿನ್ನೆ ಸಂಜೆ ಲಾಡ್ಜ್ ಗಳಿಗೆ ಭೇಟಿ ನೀಡಿದ ಪೊಲೀಸರು ಸರ್ಕಾರದ ಗೈಡ್ಲೈನ್ಸ್ ಪಾಲನೆ ಮಾಡುತ್ತಿದ್ದಾರಾ ಎಂದು ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ, ರಿಜಿಸ್ಟರ್ ಬುಕ್ ಸೇರಿದಂತೆ ಅನೇಕ ದಾಖಲೆಗಳನ್ನು ಕೂಡ ಪರಿಶೀಲಿಸಿದ್ದಾರೆ.
ಈ ಕುರಿತು ವಿವರಣೆ ನೀಡಿದ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರು, ಇತ್ತೀಚೆಗೆ ಅನ್ಯ ಕೋಮಿನ ಯುವಕ ಯುವತಿಯರು ಲಾಡ್ಜ್ ನಲ್ಲಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇಲ್ಲಿ ನೈತಿಕ ಪೊಲೀಸ್ ಗಿರಿಯ ಆರೋಪಗಳು ಕೂಡ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಲಾಡ್ಜ್ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬಸ್ ನಿಲ್ದಾಣದ ಬಳಿ ಇರುವ ದುರ್ಗಾಂಬ ಲಾಡ್ಜ್ ನಲ್ಲಿ ತಪಾಸಣೆ ನಡೆಸಲು ಹೋದ ದೊಡ್ಡಪೇಟೆ ಪೊಲೀಸರಿಗೆ ಮನೆ ಮನೆಗೆ ಹೋಗಿ ಚಿನ್ನದ ಪಾಲಿಶ್ ಮಾಡಿಕೊಡುವ ಇಬ್ಬರು ಹುಡುಗರು ಲಾಡ್ಜ್ ನಲ್ಲಿ ರೂಂ ಮಾಡಿಕೊಂಡಿದ್ದು ಅವರನ್ನೂ ಸಹ ತಪಾಸಣೆಗೆ ಒಳಪಡಿಸಲಾಗಿದೆ. ನಗರದಲ್ಲಿ 50 ಲಾಡ್ಜ್ ಗಳಿದ್ದು ಅದರಲ್ಲಿ ಇವತ್ತು 28 ಲಾಡ್ಜ್ ಗಳ ತಪಾಸಣೆ ನಡೆಸಲಾಗಿದೆ. ಉಳಿದ ಲಾಡ್ಜ್ ಗಳ ತಪಾಸಣೆ ಇಂದು ನಡೆಯಲಿದೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್