Breaking
13 Jan 2026, Tue

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು
ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ
ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು,
ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ
ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್
ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ
ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು
ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ
ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ
ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು
ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ
ಸಾಹಸಪಟ್ಟು ಬೈಕ್ ಅನ್ನು ಗಟ್ಟಿಯಾಗಿ
ಹಿಡಿದುಕೊಂಡಿದ್ದಾಳೆ. ಸುಮಾರು ಅರ್ಧ ಪರ್ಲಾಂಗ್
ದೂರದವರೆಗೆ ಯುವತಿಯನ್ನು ಎಳೆದುಕೊಂಡು
ಹೋಗಿದ್ದಾರೆ.

ಆ ಸಂದರ್ಭದಲ್ಲಿ ಕರ್ತವ್ಯ ಮುಗಿಸಿ ಅದೇ ರಸ್ತೆಯಲ್ಲಿ
ತೆರಳುತ್ತಿದ್ದ ಪಶ್ಚಿಮ ಸಂಚಾರ ಠಾಣೆಯ ಪೊಲೀಸ್
ಮುನೇಶಪ್ಪ ಸರಗಳ್ಳರ ಬೆನ್ನತ್ತಿದ್ದಾರೆ. ರೆಲ್ವೆ ಟ್ರಾಕ್
ಪಕ್ಕದ ಚಾನಲ್ ರಸ್ತೆ ಮೂಲಕ ಶರಾವತಿ
ನಗರದವರೆಗೆ ಸುಮಾರು ಎರಡು ಕಿಲೋ ಮೀಅರ್
ಗೂ ಅಧಿಕ ದೂರ ಸರಗಳ್ಳರನ್ನು ಬೆನ್ನಟ್ಟಿದಾಗ ಶರಾವತಿ ನಗರದಲ್ಲಿ ಕಳ್ಳರ ಬೈಕ್ ನ ಪೆಟ್ರೋಲ್
ಖಾಲಿಯಾಗಿದ್ದರಿಂದ ಬೈಕ್ ಅಲ್ಲೇ ಬಿಟ್ಟು ಓಡಿದ್ದಾರೆ.
ಈ ಸಂದರ್ಭದಲ್ಲಿ ಅವರನ್ನು ಹಿಡಿಯಲೆತ್ನಿಸಿದ
ಮುನೇಶಪ್ಪನ ಮೇಲೆ ಚಾಕುವಿನಿಂದ ಹಲ್ಲೆಗೂ
ಯತ್ನಿಸಿದ್ದಾರೆ. ಆದರೂ ಚಾಕಚಕ್ಯತೆಯಿಂದ
ಓರ್ವನನ್ನು ಹಿಡಿಯಲು ಯಶಸ್ವಿಯಾಗಿದ್ದು, ಆರೋಪಿ
ಮೊಹಮ್ಮದ್ ಶಾರುಖ್ ನನ್ನು ಹಿಡಿದು ಜಯನಗರ
ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ಬಳಿ ಇದ್ದ
ಚಾಕು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ
ತಪ್ಪಿಸಿಕೊಂಡಿದ್ದು, ಪೊಲೀಸರು ದೂರು
ದಾಖಲಿಸಿಕೊಂಡು ಬಂಧನಕ್ಕೆ ಬಲೆ ಬೀಸಿದ್ದಾರೆ.

ಮುನೇಶಪ್ಪ ಅವರ ಸಾಹಸದ ಮಾಹಿತಿ ಪಡೆದ ಜಿಲ್ಲಾ
ಪೊಲೀಸ್ ಅಧೀಕ್ಷಕ ಲಕ್ಷ್ಮಿಪ್ರಸಾದ್ ಬಹುಮಾನದ
ಭರವಸೆ ನೀಡಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version