ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್ ಅವರು, ಸ್ಥಳೀಯ ಸಮಸ್ಯೆ ಅರ್ಥವಾಗಿದೆ. ಇಂದಿನಿಂದಲೇ ಬದಲಿ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿದರು.

ಕೋವಿಡ್ ಸಮಸ್ಯೆ ಇಡೀ ಜಗತ್ತನ್ನು ಕಾಡುತ್ತಿದೆ. ಅರೋಗ್ಯ ಸೇವೆ ಸಮಾರೋಪದಿಯಲ್ಲಿ ನಡೆಯಬೇಕಿರುವ ಸಮಯದಲ್ಲಿ ಕಳೆದ ಒಂದೂವರೆ ವರ್ಷದಿಂದ ವೈದ್ಯರು ಅನಗತ್ಯ ಗೈರಾಗುತ್ತಿದ್ದಾರೆ. ಅದರಲ್ಲೂ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿದ್ದಾರೆ. ಹೀಗಾಗಿ ತಕ್ಷಣವೇ ಸಂಬಂಧ ಪಟ್ಟ ವೈದ್ಯರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರವು ಹಿಂದಿನಿಂದಲೂ ಒಳ್ಳೆಯ ಹೆಸರನ್ನು ಪಡೆದಿದೆ. ಡಾ. ಪ್ರತಿಮಾ, ಡಾ. ಜಯರಾಮ್ ಸೇರಿದಂತೆ ಈ ಹಿಂದೆ ಇಲ್ಲಿ ಸೇವೆ ಸಲ್ಲಿಸಿದ ಎಲ್ಲರೂ ಅತ್ಯುತ್ತಮ ಸೇವೆ ನೀಡಿದ್ದಾರೆ. ಆದರೆ ಈಗಿರುವ ವೈದ್ಯರು ತಮ್ಮ ಸೇವೆಯನ್ನೇ ಮರೆತಿದ್ದಾರೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಹರಿದ್ರಾವತಿ, ಹರತಾಳು, ಹಾಗೂ ಪುರಪ್ಪೆಮನೆ ಪಂಚಾಯ್ತಿಗಳ ಒಟ್ಟು ವ್ಯಾಪ್ತಿಯಲ್ಲಿ ನೂರಾರು ಹಳ್ಳಿಗಳು ಒಳಗೊಂಡಿವೆ. ಈ ನಡುವೆ ಕರೋನ ಮೂರನೇ ಅಲೆ ಆತಂಕ ಒಡ್ಡಿದೆ. ಈ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಐದು ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಹೀಗಿರುವಾಗ ತುರ್ತಿಗೆ ಸ್ಪಂದಿಸಬೇಕಾದ ವೈದ್ಯರೆ ಇಲ್ಲ. ಹೀಗಾಗಿ ಇಂತಹ ಬೇಜವಾಬ್ದಾರಿ ವೈದ್ಯರು ನಮಗೆ ಬೇಡ ಎಂದು ಆಗ್ರಹಿಸಿದರು.

ಅಲ್ಲದೇ, ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ತಕ್ಷಣವೇ ಮೇಲ್ದರ್ಜೆಗೆ ಏರಿಸಬೇಕು. 24ಗಂಟೆಗಳ ಸೇವೆಯನ್ನು ನೀಡಬೇಕು. ಈ ಭಾಗದಲ್ಲಿ ಅಪಘಾತಗಳು ಹೆಚ್ಚಿವೆ. ಹಾಗೂ ರೈತರು ಹಾವು ಕಡಿತದಿಂದ ಹಿಡಿದು ಹಲವು  ಸಮಸ್ಯೆಗಳನ್ನು ಎದುರಿಸುತ್ತಿದ್ದೂ ನಮ್ಮ ಭಾಗಕ್ಕೆ ಪ್ರತ್ಯೇಕವಾಗಿ ಅಂಬ್ಯುಲೆನ್ಸ್  ಸೇವೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ತಾಲ್ಲೂಕು ಆರೋಗ್ಯಧಿಕಾರಿ ಮೂಲಕ ಡಿ. ಹೆಚ್. ಓ ಅವರಿಗೆ ಸಲ್ಲಿಸಲಾಯಿತು.

ಮನವಿಗೆ ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ಜಿಲ್ಲಾ ವೈದ್ಯಾಧಿಕಾರಿಗಳು, ನಿಮ್ಮೆಲ್ಲ ಬೇಡಿಕೆಗಳನ್ನು ತುರ್ತಾಗಿ ಇಲಾಖೆ ಮೂಲಕ ಬಗೆಹರಿಸುದಾಗಿ  ಭರವಸೆಯನ್ನು ನೀಡಿದರು.

ಟಿ. ಹೆಚ್. ಓ ಮತ್ತು ಡಿ. ಹೆಚ್. ಓ ಅವರ ಭರವಸೆ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಕ. ರ. ವೇ. ಅಧ್ಯಕ್ಷ ಉದಯ್ ಶೆಟ್ಟಿ, ಸಂಘಟನೆಯ ತಾಲ್ಲೂಕು ಅಧ್ಯಕ್ಷ ಹೆಚ್. ಆರ್. ರಾಘವೇಂದ್ರ, ಸಾಮಾಜಿಕ ಹೋರಾಟಗಾರ, ಕಲಾವಿದ ಯೇಸು ಪ್ರಕಾಶ್, ಬಂಟರ ಸಂಘದ ಅಧ್ಯಕ್ಷ ನಾಗರಾಜ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಮಂಜುನಾಥ್ ಬ್ಯಾಣದ, ಹರತಾಳು ಗ್ರಾ. ಪಂ ಸದಸ್ಯ  ನಾರಿ ರವಿ, ಮಹೇಶ್ ಶೆಟ್ಟಿ, ಅಭಿ ಶೆಟ್ಟಿ, ಜಯಕುಮಾರ್, ರಾಘವೇಂದ್ರ, ಅಶೋಕ್ ಕೆ. ಪಿ., ಅನಿಲ್,ಸಂತೋಷ್, ರಾಕೇಶ್, ಬಸವರಾಜ್, ಕಲಂದರ್, ಅಭಿಜಿತ್, ಸತೀಶ್ ಶೆಟ್ಟಿ  ಮೊದಲಾದವರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

6 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

9 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

9 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

10 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

17 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

18 hours ago