ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :
ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…