Headlines

ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಯೋಗೇಂದ್ರ ಶ್ರೀಗಳು

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಶ್ರೀ ಯೋಗೇಂದ್ರ ಶ್ರೀಗಳು ಹೇಳಿದರು. ಕಾರ್ತಿಕೇಯ ಕ್ಷೇತ್ರದಿಂದ ರಿಪ್ಪನ್‌ಪೇಟೆ ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಕಾರ್ತಿಕೇಯ ಕಪ್-೨೦೨೧ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ಕ್ರೀಡೆಗಳು ಸೋಲು…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಅರಸಾಳು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ, ಖುಷಿ, ಉಲ್ಲಾಸಗಳಿಂದ ಆಚರಿಸಿದರು .  ಶುಕ್ರವಾರ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಗಳೊಂದಿಗೆ ಸಂಭ್ರಮದ ಕ್ರಿಸ್ಮಸ್‌ ಆಚರಣೆ ನಡೆಯಿತು. ಸಾಮೂಹಿಕ ಪ್ರಾರ್ಥನೆ, ದಿವ್ಯಬಲಿ ಪೂಜೆ ನಡೆಯುವ ಭಕ್ತಿ ಶ್ರದ್ಧೆಯ ಕೇಂದ್ರವಾದ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್‌ಗಳ ವಠಾರದಲ್ಲಿ ಸುಂದರ ಗೋದಲಿಗಳನ್ನು ರಚಿಸಿ, ಏಸುಕ್ರಿಸ್ತರ ಜನನವನ್ನು ಸಂಕೇತಿಸುವ ದೃಶ್ಯಗಳ ಮರುಸೃಷ್ಟಿಯಲ್ಲಿ ಸಂಭ್ರಮಿಸಿದರು . ಗೋದಲಿಗಳ ಮುಂದೆ ಮಕ್ಕಳು. ಹಿರಿಯರು….

Read More

ತೀರ್ಥಹಳ್ಳಿಯ ಯುವ ಸಾಹಿತಿ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ರಶ್ಮಿ ಸನಿಲ್ ರವರಿಗೆ ರಾಜ್ಯೋತ್ಸವ ಪ್ರಶಸ್ತಿ :

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ತೀರ್ಥಹಳ್ಳಿಯ ಯುವ ಸಾಹಿತಿ ಹಾಗೂ ಪತ್ರಕರ್ತ ಅರುಣ್ ಮಂಜುನಾಥ್ ಹಾಗೂ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ರವರಿಗೆ  ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವು ಹಾಗೂ ಮುಖ್ಯ ಅತಿಥಿಗಳಾದ ನಾಗರತ್ನಮ್ಮ,ಹುಲಿಯೂರುದುರ್ಗ ಲಕ್ಷೀ ನಾರಾಯಣ್,ಡಾ ಶಿವರಾಜ್ ಗೌಡ, ಹೆಚ್…

Read More

ಪುನೀತ್ ರಾಜಕುಮಾರ್ ನಾಮಫಲಕವನ್ನು ಅಳಿಸಿದ ಕಿಡಿಗೇಡಿಗಳು:: ಕಿಡಿಗೇಡಿಗಳ ಬಂಧನಕ್ಕೆ ಕಸ್ತೂರಿ ಕನ್ನಡ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಯ :

ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು. ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ.  ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ :  ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ರಿಪ್ಪನ್ ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ : ಮಲೆನಾಡಲೊಂದು ಧಾರುಣ ಘಟನೆ

ರಿಪ್ಪನ್‌ಪೇಟೆ: ಸಮೀಪದ ಗರ್ತಿಕೆರೆಯಲ್ಲಿ ಬುಧವಾರ ರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೋರ್ವ ಕೊಲೆಯಾಗಿ ಕೆರೆಯಲ್ಲಿ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ, ಗರ್ತಿಕೆರೆಯ ಕೋಳಿ ಪಯಾಜ್,ಗರ್ತಿಕೆರೆಯ ಕೃಷ್ಣ ಎಂಬ ಸ್ನೇಹಿತರುಗಳು ಸೇರಿ ಬುಧವಾರ ತಡರಾತ್ರಿ ಸತೀಶ್ ಶೆಟ್ಟಿಯ ಮನೆಯಲ್ಲಿ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾರೆ. ನಂತರ ಮೂವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿದಂತೆ ಜಗಳವಾಗಿ ಕೋಳಿ ಪಯಾಜ್ ಹಾಗೂ ಕೃಷ್ಣ ಸೇರಿ ಮಾರಕಾಸ್ತ್ರಗಳಿಂದ ಸತೀಶ್ ಶೆಟ್ಟಿ (53)ಯನ್ನು ಕೊಲೆ ಮಾಡಿ…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

ತೀರ್ಥಹಳ್ಳಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ಆತ್ಮಹತ್ಯೆ : ಅತಿಥಿ ಉಪನ್ಯಾಸಕರ ಮೇಲಿನ ಸರ್ಕಾರದ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣವಾಯಿತಾ ?????

ತೀರ್ಥಹಳ್ಳಿ: ಇಲ್ಲಿನ ಸರ್ಕಾರಿ ಪದವಿ ಕಾಲೇಜಿನ  ಗಣಕ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ  ಶ್ರೀಹರ್ಷ ಶಾನ್ ಬೋಗ್(38) ಇವರು ತಮ್ಮ ಹೆಬ್ರಿ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಶ್ರೀಹರ್ಷ ಸುಮಾರು 13 ವರ್ಷಕ್ಕೂ ಹೆಚ್ಚು ಕಾಲದಿಂದ ಈ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಅತ್ಯಂತ ಉತ್ತಮ ಉಪನ್ಯಾಸಕ ಎಂದು ಹೆಸರು ಪಡೆದವರು, ಕೊರೊನ ಸಂಕಷ್ಟ ಪರಿಸ್ಥಿತಿ ಜೀವನ ನಿರ್ವಹಣೆಯ ಕಷ್ಟ ಸಾಧ್ಯ, ಅತಿಥಿ ಉಪನ್ಯಾಸರಿಗೆ ಸರ್ಕಾರದ ಸೇವಾ ಭದ್ರತೆ ಆರ್ಥಿಕ ನೆರವು…

Read More

ಪ್ರವೇಶ ಪತ್ರ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ಕಾನೂನು ವಿದ್ಯಾರ್ಥಿಗಳು :

ಶಿವಮೊಗ್ಗ : ಕಾನೂನು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು 20 ವಿದ್ಯಾರ್ಥಿಗಳು ಪರೀಕ್ಷೆ ವಿರೋಧಿಸಿ ಪ್ರತಿಭಟಿಸಿದರು. ಎಟಿಎನ್ ಸಿಸಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆಗೆ ಅವಕಾಶವಿದೆ. ಆದರೆ ಈ ಆನ್ ಲೈನ್ ನ್ನ ವಿಶ್ವವಿದ್ಯಾಲಯ ರದ್ದುಪಡಿಸಿ ಆಫ್ ಲೈನ್ ನಲ್ಲಿ ಮಾತ್ರ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ. ಪಿಯುಸಿ ನಂತರದ ಕಾನೂನು…

Read More