Headlines

ವಲಸೆ ಬಂದು ಹೋಗುವ ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಏನು ಗೊತ್ತು : ಬೇಳೂರು ಗೋಪಾಲಕೃಷ್ಣ

ಸಾಗರ. ಇಂದು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ  ಸಾಗರದ ಮಾಜಿ ಶಾಸಕರಾದ ಗೋಪಾಲ ಕೃಷ್ಣ ಬೇಳೂರು  ಶಾಸಕ ಹಾಲಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ ಶಾಸಕ ಹಾಲಪ್ಪ ತುಮರಿ ಭಾಗದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ರಿಕೇಟ್ ನೋಡುತ್ತ ಕುಳಿತ ಶಾಸಕ ಹಾಲಪ್ಪ ಸರಿಯಾದ ಸಮಯಕ್ಕೆ ತುಮರಿ ಗ್ರಾಮಕ್ಕೆ ಹೋಗಿದ್ದರೆ ಎರಡು ಜೀವ ಉಳಿಯುತ್ತಿತ್ತು ಇವರಿಗೆ ಎರಡು ಜೀವಕ್ಕಿಂತ ಕ್ರಿಕೆಟ್ ನೋಡುವುದೆ ಮುಖ್ಯವಾಗಿದೆ. ಆಕ್ಸಿಜನ್ ವ್ಯವಸ್ಥೆ ಇಲ್ಲದ ಸೆಕೆಂಡ್ ಹ್ಯಾಂಡ್ ಆಂಬುಲೆನ್ಸ್ ನೀಡಿ ಪ್ರಚಾರಕ್ಕಾಗಿ ನಗರಸಭೆಯಲ್ಲಿ ಸಮಾರಂಭ…

Read More

ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಎರಡು ದಿನದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಕೆಂಚನಾಲ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಮಾತನಾಡಿ ಕ್ರೀಡೆ ಎನ್ನುವುದು ಯುವಕರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಕಂಪ್ಯೂಟರ್‌ ಚಟುವಟಿಕೆಗಳಲ್ಲಿ ತೊಡಗದೆ, ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು `ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996…

Read More

ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಮುಸ್ಲಿಂ ಸ್ಮಶಾನದ ಮುಂಭಾಗದ ಕಬ್ಬಿನ ಹಾಲಿನ ಮಶೀನ್ ಪಕ್ಕದ ಮರದಲ್ಲಿ ಸುಮಾರು 35 ವರ್ಷದ ಅನಾಮಧೇಯ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇರಿಸಲಾಗಿದೆ. ಅನಾಮಧೇಯ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು ಹಾಗೂ 01 ಇಂಚು ಉದ್ದದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನು ಕಂದು ಕೆಂಪು…

Read More

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್…

Read More

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

ಶಿವಮೊಗ್ಗದ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ : ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಶಿವಮೊಗ್ಗ : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಖಾಸಗಿ ಲಾಡ್ಜ್ ನಲ್ಲಿ ಪತ್ತೆಯಾಗಿದ್ದಾಳೆ ಎಂದು ಆರೋಪಿಸಿ ಇಂದು ಬಜರಂಗರಂಗ ದಳ ಸಂಘಟನೆಯ ಕಾರ್ಯಕರ್ತರು ಖಾಸಗಿ ಹೋಟೆಲ್ ಎದುರು ಪ್ರತಿಭಟನೆ ನಡೆಸಿತು ನಿನ್ನೆಯ ದಿನ ಹೊನ್ನಾಳಿ ರಸ್ತೆ ಯಲ್ಲಿರುವ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನು ಹಿಂದೂ ಯುವತಿಯನ್ನ ಕರೆದುಕೊಂಡು ಬಂದು ಉಳಿದಿರುವುದು ಬಜರಂಗದಳದ ಸಂಘಟನೆಯ ಕಾರ್ಯಕರ್ತರ ಕಣ್ಣು ಕೆಂಪಾಗುವಂತೆ ಮಾಡಿದೆ. ದಾವಣಗೆರೆ ಜಿಲ್ಲೆಯ ಯುವಕ ಮತ್ತು ಯುವತಿಯರು ಹಳೆಯ ಪರಿಚಯದ ಮೇಲೆ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದ್ದು….

Read More

ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ಸಾಗರದಲ್ಲಿ ನವಜಾತ ಶಿಶು ಸಾವು !

ಸಾಗರ :  ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತುಮರಿಯಲ್ಲಿ ನಡೆದಿದೆ. ತುಮರಿ ಸಮೀಪದ ಚದರವಳ್ಳಿ ಗ್ರಾಮದ ಚೈತ್ರಾ ಎನ್ನುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಅ್ಯಂಬುಲೆನ್ಸ್ ಇಲ್ಲದೇ ಖಾಸಗಿ ವಾಹನದಲ್ಲಿ ಗರ್ಭಿಣಿಯನ್ನು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಈ ವೇಳೆ ಮಹಿಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಡವಾಗಿ ಬಂದಿದ್ದರಿಂದ ತಾಯಿ- ಹಾಗೂ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದೆ. ಹೆಚ್ಚಿನ ಚಿಕಿತ್ಸೆಗೆ ಸಾಗರ ತಾಲೂಕು…

Read More