ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!
ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…


