ಶವ ಸಾಗಿಸಲು ರಸ್ತೆ ಸಂಪರ್ಕ ಇಲ್ಲದೆ ಮೌನಿಯಾಯಿತೆ ಬಡ ಕುಟುಂಬ ? ಗೌತಮಪುರ ದಲ್ಲೊಂದು ಹೃದಯ ವಿದ್ರಾವಕ ಘಟನೆ!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಇದೀಗ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಯಿತು. ಬಲಿಪಾಡ್ಯಮಿಯ ದಿನ ನಿನ್ನೆ ರಾಜಮ್ಮ 70  ವರ್ಷ ವಯೋ ಸಹಜತೆಯಿಂದ ಸಾವಿಗೀಡಾಗಿದ್ದಾರೆ  ಸುಮಾರು ಇಪ್ಪತ್ತು ವರ್ಷದಿಂದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ರಸ್ತೆ ತಡೆ ಹಾಕಿದ್ದು ನಂತರ  ಗ್ರಾಮಸಭೆಯಲ್ಲಿ ತೀರ್ಮಾನವಾದರೂ  ರಸ್ತೆ ತೆರವುಗೊಳಿಸಲು ಆದೇಶ ನೀಡಿದ್ದರೂ ಗ್ರಾಮಾಡಳಿತವಾಗಲಿ ಅಥವಾ ತಾಲ್ಲೂಕು ಆಡಳಿತವಾಗಲೀ ಈ ಕೆಲಸಕ್ಕೆ ಮುಂದಾಗಲಿಲ್ಲ. ಇದರ ಪರಿಣಾಮ ರಾಜಮ್ಮ ಮರಣಹೊಂದಿ 24 ಘಂಟೆ ಯಾದರೂ ಕೂಡ ಶವ ಸಾಗಿಸಲು…

Read More

ಸ್ಕೂಟಿ ಹಾಗೂ ಬಸ್ ನಡುವೆ ಭೀಕರ ಅಪಘಾತ : ಇಬ್ಬರ ಸಾವು

  ಶಿವಮೊಗ್ಗ : ಮಾಚೇನಹಳ್ಳಿಯ ಶಿಮುಲ್ ಡೈರಿ ಎದುರುಗಡೆ ಕೆಎಸ್ ಆರ್ ಟಿ ಸಿ ಬಸ್  ಸ್ಕೂಟಿಗೆ  ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನ ಭದ್ರಾವತಿ ಕಡೆಯಿಂದ ಡೈರಿ ಹಿಂಭಾಗದ ಜಯಂತಿ ಗ್ರಾಮಕ್ಕೆ ತಿರುಗುವ ವೇಳೆ ದ್ವಿಚಕ್ರ ವಾಹನಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರಾದ ಮಂಜುನಾಥ್ (25) ಹಾಗೂ ಆಂಥೋಣಿ ಎಂಬುವರು ಸ್ಥಳದಲ್ಲಿಯೇ…

Read More

ದೀಪಾವಳಿ ನೋನಿಗೆ ಸಾವಿರ ಹಣ್ಣು ಕಾಯಿ ನೈವೇದ್ಯ ಬಯಸುವ ಮಲೆನಾಡಿನ ದೈವ ! ಹಾಗಾದರೆ ಇದು ಯಾವ ಗ್ರಾಮದ ದೇವತೆ ? ಒಮ್ಮೆ ಈ ಸುದ್ದಿ ನೋಡಿ

ಬೆಳಕಿನ ಹಬ್ಬ ದೀಪಾವಳಿ ಎಂದರೆ ಅದೇನೋ ಸಡಗರ ಅದೆಷ್ಟೋ ಸಂಭ್ರಮ ಮಲೆನಾಡಿನಲ್ಲಂತೂ ಹಬ್ಬದ ಸಡಗರ ಸಂಭ್ರಮ ಹೇಳತೀರದು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದಲ್ಲಿ ಗಾಮೇಶ್ವರ ದೈವವು ವಿಶಿಷ್ಟವಾದಂತಹ  ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷವೂ ನೋನಿ ಹಬ್ಬದಂದು ಈ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ನೂರಾರು  ವರ್ಷಗಳ ಇತಿಹಾಸವಿರುವ   ಈ ಗಾಮೇಶ್ವರ ದೈವ ವೃಕ್ಷಕ್ಕೆ ಗ್ರಾಮದ ಪ್ರತಿ ಕುಟುಂಬದ ಪುರುಷರು ಉಪವಾಸ ವ್ರತದೊಂದಿಗೆ ಆಗಮಿಸಿ ದೈವಕ್ಕೆ ನಮಿಸಿ ಸಾವಿರಾರು ಹಣ್ಣುಕಾಯಿ ಸಮಪಿ೯ಸುವಂತಹ ಪ್ರತೀತಿಯಿದೆ.  ಐಗಿನಬೈಲು…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್…

Read More

ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರ ಬಂಧನ :

ಶಿವಮೊಗ್ಗ : ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್ ಎಂಎಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ….

Read More

ಶಿವಮೊಗ್ಗ : ಪತ್ನಿಗೆ ವೀಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡ ಜೈಲು ವಾರ್ಡನ್ : ಪತಿಯ ಸಾವಿನ ದೃಶ್ಯ ಕಂಡು ಕಂಗಲಾದ ಪತ್ನಿ

ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್​ಗೆ ಒಂದು ಮಗು ಕೂಡ ಇದೆ….

Read More

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಬೀದಿಗಿಳಿದ ಜಿಲ್ಲಾ ಕಾಂಗ್ರೆಸ್ :

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read More

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ :

ರಿಪ್ಪನ್ ಪೇಟೆ : ಹಾನಗಲ್ ವಿಧಾನಸಬೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ  ಜಯಭೇರಿ ಬಾರಿಸಿದ ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಹೆಚ್ಚಿನ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಮಾತನಾಡಿ, ಕಾಂಗ್ರೆಸ್‌ನ ಜನಪರ ಕಾರ್ಯಗಳು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಭಾರಿ ಬಹುಮತದಿಂದ ವಿಜೇತರನ್ನಾಗಿಸಿದ ಹಾನಗಲ್ ವಿಧಾನ…

Read More