Headlines

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

ತೀರ್ಥಹಳ್ಳಿಯಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ,ಹಬ್ಬದ ವಾತಾವರಣ: ಮಾಧ್ಯಮಕ್ಕೆ ಮಾಹಿತಿ ನೀಡದೇ ತಾಲೂಕು ಆಡಳಿದಿಂದ ನಿರ್ಲಕ್ಷ್ಯ

ತೀರ್ಥಹಳ್ಳಿ: ತಾಲೂಕು ಆಡಳಿತ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸಹಕಾರದಲ್ಲಿ ನಡೆಯುವ ರಾಜ್ಯೋತ್ಸವವನ್ನು ಸೋಮವಾರ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ. ಪಟ್ಟಣದ ಗೋಪಾಲ ಗೌಡ ರಂಗಮಂದಿರದಲ್ಲಿ ಹಬ್ಬದ ವಾತಾವರಣಕ್ಕೆ ಸಾಂಸ್ಕೃತಿಕ ಸ್ಪರ್ಶವನ್ನು ನೀಡಲಾಗಿದೆ.  ಕೊರೊನಾ ಸೋಂಕಿನ ಕಾರಣ ಎರಡು ವರ್ಷಗಳಿಂದ ಅಷ್ಟೊಂದು ಸಂಭ್ರಮಾಚರಣೆ ಇರಲಿಲ್ಲ. ಈ ವರ್ಷ ಉತ್ತಮವಾಗಿ ಆಚರಿಸಬೇಕು ಎನ್ನುವ ಆಶಯ ತಾಲೂಕಿನ ಜನತೆಯಲ್ಲಿತ್ತು. ಆದರೆ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ತಾಲೂಕಿನಲ್ಲಿ ಆಚರಿಸುತ್ತಿದ್ದು ಈ ಬಾರಿಯೂ ಸಮಾರಂಭ ಹಮ್ಮಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಜನತೆಗೆ ಮಾಹಿತಿಯನ್ನು ನೀಡುವ…

Read More

ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :

ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.  ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…

Read More

ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More

ರಿಪ್ಪನ್ ಪೇಟೆ : ಯುವ ಕ್ರಿಕೆಟರ್ ತಂಡದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ :

ರಿಪ್ಪನ್ ಪೇಟೆ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ.ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೇತಾರಿಗದಲ್ಲಿ ಯುವ ಕ್ರಿಕೆಟರ್ಸ್ ಶೆಟ್ಟಿಬೀಡು ಇವರ ವತಿಯಿಂದ ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ  ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ಈ ಸಂಧರ್ಭದಲ್ಲಿ ಯುವ ಕ್ರಿಕೆಟರ್ ತಂಡದ ನಾಗರಾಜ್ ಎ,ರಾಜೇಶ್ ಎ,ಅಭಿ…

Read More