ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ದೇಶ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸ್ವಾತಂತ್ರ್ಯದ  ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ. ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ…

Read More

ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ಸಾಗರ : ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಹಾಗೂ ಎಸ್ ಡಿಎಂ ಸಿ ಸದಸ್ಯರಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ :

ಸಾಗರ : ಮಕ್ಕಳು ಓದಿ ವಿದ್ಯಾವಂತರಾಗಲೆಂದು ಹಲವು ಕನಸುಗಳನ್ನು ಕಂಡು ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ.ಆದರೆ ಶಾಲೆಯಲ್ಲಿ ಶಿಕ್ಷಕರೇ ಸರಿಯಾಗಿ ಬೋಧನೆ ಮಾಡದಿದ್ದರೆ ಮಕ್ಕಳು ವಿದ್ಯಾಭ್ಯಾಸ ಕಲಿಯುವುದು ಹೇಗೆ ಎಂಬುವುದು ಸರ್ವೇ ಸಾಮಾನ್ಯ ವಿಚಾರ. ಆದರೆ ಇದೀಗ ಇಲ್ಲೋಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಹಾಗೂ ಬಿಇಒ ಕಚೇರಿ ಮುಂದೆ ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಸದಸ್ಯರು ಶಿಕ್ಷಕರ ನಿಯೋಜನೆ ಮಾಡಲೆಂದು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಮುಖಂಡ ಸುಳುಕೋಡು ನಾರಾಯಣಪ್ಪ ನಿಧನ : ಗಣ್ಯರ ಸಂತಾಪ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Read More

ಭದ್ರಾವತಿ: ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಜಯಂತಿ:

ಭದ್ರಾವತಿ: ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರ 106 ನೇ ಜಯಂತಿ ಆಚರಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್  ಕಾರ್ಯಕ್ರಮ ಉದ್ಘಾಟಿಸಿ,  ಹಿಂದುಳಿದ ವರ್ಗಗಳ ಹರಿಕಾರ ದಿ: ದೇವರಾಜ ಅರಸುರವರ ಸಾಧನೆಗಳನ್ನು ಕುರಿತು ಮಾತನಾಡಿದರು. ತಹಸೀಲ್ದಾರ್ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ಮುಖಂಡ ಟಿ.ವೆಂಕಟೇಶ್, ಮುಂತಾದವರು…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ ನಿಧನ:

ರಿಪ್ಪನ್ ಪೇಟೆ: ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ (61) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗುರುವಾರ ರಾತ್ರಿ ತೀವ್ರ ತರವಾದ ಎದೆನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.ಶುಕ್ರವಾರ ಮಧ್ಯಾಹ್ನ 12ಕ್ಕೆ ರಿಪ್ಪನ್ ಪೇಟೆಯ ಖಬರ್ಸ್ಥಾನ್ ನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ….

Read More