ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…

Read More

ಸಹೃದಯಿ ಶಾಸಕ ಆರಗ ಜ್ಞಾನೇಂದ್ರರವರಿಗೆ ಗೃಹಖಾತೆ ಲಭಿಸಿರುವುದು ಖುಷಿ ತಂದಿದೆ : ಎಂ ಬಿ ಲಕ್ಷಣಗೌಡ

ರಿಪ್ಪನ್ ಪೇಟೆ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸರಳ ಹಾಗೂ ಸಹೃದಯಿ ವ್ಯಕ್ತಿತ್ವದ ಜನನಾಯಕ ಆರಗ ಜ್ಞಾನೇಂದ್ರರವರು ಗೃಹ ಸಚಿವರಾಗಿ ಆಯ್ಕೆಯಾಗಿರುವುದು ಸಮಾಜಕ್ಕೆ ಹರ್ಷ ತಂದಿದೆ ಎಂದು ಹೊಸನಗರ ತಾಲೂಕಿನ ಒಕ್ಕಲಿಗ ಸಮಾಜದ ಅಧ್ಯಕ್ಷರಾದ ಎಂ ಬಿ ಲಕ್ಷಣಗೌಡ ಹೇಳಿದ್ದಾರೆ. ಕಳೆದ 45 ವರ್ಷಗಳಿಂದ ಸಂಘ ಪರಿವಾರದಲ್ಲಿ ಸಕ್ರೀಯ ನಾಯಕರಾಗಿದ್ದು 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿ ಎಂದಿಗೂ ಅಧಿಕಾರಕ್ಕಾಗಿ ಲಾಭಿ ನಡೆಸದೇ ಇದ್ದ ಜನನಾಯಕನಿಗೆ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಗೃಹ ಸಚಿವರಾಗಿ…

Read More

ಹೊಸನಗರ :ಸಾರ್ವಜನಿಕ ಆಸ್ಪತ್ರೆಯಲ್ಲೆ ನೇಣಿಗೆ ಶರಣಾದ ರೋಗಿ:

ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿದ್ದ  ಸೊನಲೆಯ ರೋಗಿಯೊಬ್ಬ ಆಸ್ಪತ್ರೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊನಲೆಯ ವಾಸಿ ಕೃಷಿಕ ವೃತ್ತಿ ಮಾಡಿಕೊಂಡಿದ್ದ ಜಗದೀಶ್ (50) ಎಂಬುವವರು ಅನಾರೋಗ್ಯ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು,ಶನಿವಾರ ಮಧ್ಯರಾತ್ರಿ ತಾನು ಮಲಗಿದ್ದ ಕೊಠಡಿಯಿಂದ ಹೊರಬಂದ ಜಗದೀಶ್ ಸಾರ್ವಜನಿಕ ಆಸ್ಪತ್ರೆ ಎರಡನೆ ಅಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸರಳುಗಳಿಗೆ ತಾನು ಧರಿಸಿದ ಲುಂಗಿಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ….

Read More

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ರಿಪ್ಪನ್ ಪೇಟೆ: ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ರಾಮ ನಾಯಕ್

 ರಿಪ್ಪನ್ ಪೇಟೆ: ಕೆನರಾ ಬ್ಯಾಂಕ್ ರಾಷ್ಟ್ರದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿದ್ದು. ವಾಣಿಜ್ಯ ಕೃಷಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ  ಗಣನೀಯ ಸೇವೆಯನ್ನು ನೀಡುತ್ತಿದೆ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಮ ನಾಯಕ್ ಹೇಳಿದರು.  ಶುಕ್ರವಾರ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ನೂತನವಾಗಿ ನಿರ್ಮಿಸಲಾದ ಬಂಗಾರ ಸಾಲದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆನರಾ ಬ್ಯಾಂಕ್ ಗ್ರಾಹಕರ ಪರವಾಗಿ ಹಗಲಿರುಳು ಶ್ರಮಿಸುತ್ತಿದ್ದು ಎಲ್ಲ ಗ್ರಾಹಕರಿಗೂ ಬ್ಯಾಂಕಿನ ಸೌಲಭ್ಯಗಳು ಸಿಗಲೇಬೇಕೆಂಬ ಸದುದ್ದೇಶದಿಂದ  ಕಾರ್ಯನಿರ್ವಹಿಸುತ್ತಿದೆ. ಕೇಂದ್ರ…

Read More

ಕೊಳಕು ಮಂಡಲ ಹಾವು ಕಚ್ಚಿ ಜೀವನದ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಸರಗುಂದದ ಬಡ ವಿದ್ಯಾರ್ಥಿಯ ಬದುಕು:

ಆನಂದಪುರ: ಓದಿ ಜೀವನದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದಂತಹ ವಿದ್ಯಾರ್ಥಿಯ ಬದುಕಲ್ಲಿ ಇದೀಗ ಕತ್ತಲು ಆವರಿಸಿದಂತಾಗಿದೆ. ಇತರ ವಿದ್ಯಾರ್ಥಿಗಳಂತೆ ಆಟ ಪಾಠ ಕಲಿಯೋಣವೆಂದರೆ ನಡೆಯಲು ಬಾರದ ಪರಿಸ್ಥಿತಿಗೆ ಈ ವಿದ್ಯಾರ್ಥಿ ಈಗ ತಲುಪಿದ್ದಾನೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸರಗುಂದ ಗ್ರಾಮದ ವಿದ್ಯಾರ್ಥಿ ಸ್ಕಂದನ ಎಂಬ ಹತ್ತನೇ ತರಗತಿ ಓದುತ್ತಿದ್ದ ಆ ವಿದ್ಯಾರ್ಥಿ ಮನೆಯ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕೊಳಕುಮಂಡಲ ಹಾವು ಕಚ್ಚಿ ಇದೀಗ ಕಾಲು ಕೊಳೆಯುವಂತಹ ಸ್ಥಿತಿ ಬಂದಿದೆ. ಮನೆಯಲ್ಲಿ ನೋಡಿದರೆ ಆರ್ಥಿಕ ಸ್ಥಿತಿ…

Read More