ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಿಪ್ಪನ್ ಪೇಟೆಗೆ:

ರಿಪ್ಪನ್ ಪೇಟೆ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಕೆ ಎಸ್ ಈಶ್ವರಪ್ಪ ರವರು ನಾಳೆ ರಿಪ್ಪನ್ ಪೇಟೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಈಶ್ವರಪ್ಪರವರು ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌…

Read More

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕುಗ್ರಾಮದ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ:

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಗ್ರಾಮಸ್ಥರು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆಯನ್ನು ನಡೆಸಿದ ಘಟನೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ  ಎಂಬ ಅವಳಿ ಗ್ರಾಮದಲ್ಲಿ ನಡೆದಿದೆ. ಒಂದಗದ್ದೆ ಹಾಗೂ ನೀರೇರಿ ಗ್ರಾಮಗಳು ಅವಳಿ ಗ್ರಾಮಗಳಾಗಿವೆ. ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.  ಈ ಮೂಲಭೂತ ಸೌಕರ್ಯಗಳ…

Read More

ಈಡೇರಿದ ತೀರ್ಥಹಳ್ಳಿ ಜನತೆಯ ಬಹುದಿನಗಳ ಕನಸು :ಸಚಿವರಾಗಿ ಆರಗ ಜ್ಞಾನೇಂದ್ರ ಇಂದು ಪ್ರಮಾಣ ವಚನ ಸ್ವೀಕಾರ

  ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ದೊರೆತಿದ್ದು ಇಂದು ಮಧ್ಯಾಹ್ನ 2.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವಿಷಯವನ್ನು ಮಾಧ್ಯಮದವರೊಂದಿಗೆ ಹಂಚಿಕೊಳ್ಳುವಾಗ ಜ್ಞಾನೇಂದ್ರ ರವರು ತುಂಬಾ ಭಾವುಕರಾಗಿದ್ದರು.ಸಚಿವ ಸ್ಥಾನಕ್ಕಾಗಿ ಯಾವುದೇ ಲಾಭಿ ಮಾಡದ ಜನನಾಯಕನಿಗೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ನ ಬಿಗ್ ಇಂಪ್ಯಾಕ್ಟ್: ವರದಿ ನೋಡಿ ತಕ್ಷಣ ಎಚ್ಚೆತ್ತ ಅಧಿಕಾರಿಗಳು:

ಸಾಗರ: ಕಳೆದ 3ದಿನಗಳ ಹಿಂದೆ ನಿಮ್ಮ ನೆಚ್ಚಿನ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸಾಗರದ ಪೋಲಿಸ್ ಇಲಾಖೆಯ ವಸತಿಗೃಹಗಳು ಕಾಡಿನಂತಾಗಿವೆ ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಸುದ್ದಿ ಪ್ರಸರಣದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೀಗ ಪೋಲಿಸ್ ವಸತಿಗೃಹಗಳಿಗೆ ಹೊಸ ಜೀವಕಳೆಯನ್ನು ನೀಡುತ್ತಿದ್ದಾರೆ.ಸುತ್ತಮುತ್ತಲ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಮುಂದೆ ಉಂಟಾಗುತ್ತಿದ್ದ ರೋಗರುಜಿನಗಳಿಗೆ ಇದೀಗ ಕಡಿವಾಣ ಹಾಕಿದಂತಾಗಿದೆ. ಸಾಮಾಜಿಕ ಸಮಸ್ಯೆಗಳನ್ನು ಅರಿತ ಪೋಸ್ಟಮನ್ ನ್ಯೂಸ್ ತಂಡ ಅಧಿಕಾರಿಗಳನ್ನ ಎಚ್ಚೆತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದರಿಂದ ಪೊಲೀಸ್ ವಸತಿಗೃಹದ ಸುದ್ದಿಯನ್ನು ಬಿತ್ತರಿಸಿ ಅಧಿಕಾರಿಗಳು…

Read More

ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ ಕೆ ಸಂಗಮೇಶ್ವರ್

ಭದ್ರಾವತಿ : ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿದರು.  ತಾಲೂಕಿನ ಜೀವನದಿಯಾದ ಭದ್ರಾ  ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು.    ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು,…

Read More

ತೀರ್ಥಹಳ್ಳಿ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಕುಸಿತ:

ತೀರ್ಥಹಳ್ಳಿ: ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ತೀರ್ಥಹಳ್ಳಿಯ ಭಾರತಿಪುರ ಎಂಬಲ್ಲಿ ಅಪಾಯಕಾರಿಯಾಗಿ ಕುಸಿದಿದೆ.  ಈ ಮಾರ್ಗವಾಗಿ ಅತಿಭಾರದ ವಾಹನಗಳು ಓಡಾಡುವುದರಿಂದ ರಸ್ತೆ ಇನ್ನಷ್ಟು ಕುಸಿದು ಜೀವಹಾನಿಯಾಗಬಹುದು ಮತ್ತು ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳಲೂಬಹುದು.  ರಸ್ತೆಯ ಪಕ್ಕದಲ್ಲಿರುವ ತೋಟಗಳ ಮಾಲಿಕರು ತೋಟಗಳಿಗಾಗಿ ಮಣ್ಣು ತೆಗೆದ ಪರಿಣಾಮವಾಗಿ ರಸ್ತೆ ಕುಸಿತ ಕಂಡಿದೆ ಎಂಬುದು ಸ್ಥಳೀಯರ ಮಾತು. ಹೆಚ್ಚು ಮಳೆಯಾಗುವ ಪ್ರದೇಶಗಳು ಹಾಗು ಮಲೆನಾಡಿನಲ್ಲಿ ರಸ್ತೆಯ ಪಕ್ಕದ ಗುಡ್ಡಗಳು ಮಳೆಗಾಲದಲ್ಲಿ ಕುಸಿಯುವುದು…

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಕೊರೊನಾ ಭೀತಿ: ಆಗುಂಬೆ ಚೆಕ್ ಪೋಸ್ಟ್ ಬಿಗಿಗೊಳಿಸಲು ಮುಖ್ಯಮಂತ್ರಿಗಳಿಂದ ಆದೇಶ:

ತೀರ್ಥಹಳ್ಳಿ: ಕರಾವಳಿ ಭಾಗ ಹಾಗೂ ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಅನುಮತಿ ನೀಡಿದ್ದಾರೆ.  ಶಿವಮೊಗ್ಗ ಜಿಲ್ಲೆ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಇನ್ನೂ ಕೂಡಾ ಕೋವಿಡ್ ಸಂಪೂರ್ಣ ಹತೋಟಿಗೆ ಬಾರದಾಗಿದೆ ಜತೆಗೆ ಮೂರನೆಯ ಅಲೆ ಪ್ರಾರಂಭವಾಗುವ ಅನುಮಾನಗಳಿದ್ದು ತ್ವರಿತ ತಪಾಸಣೆ ಹಾಗೂ ಚಿಕಿತ್ಸೆಗೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದರ ಜತೆಗೆ ಆಗುಂಬೆಯಲ್ಲಿ ಚೆಕ್ ಪೋಸ್ಟ್…

Read More

ರಿಪ್ಪನ್ ಪೇಟೆ: ಶಾಸಕ ಹರತಾಳು ಹಾಲಪ್ಪರವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಸಮಾಜದವರಿಂದ ಒತ್ತಾಯ:

 ರಿಪ್ಪನ್‌ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ, ಎಂಎಸ್ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪನವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವಂತೆ ರಿಪ್ಪನ್‌ಪೇಟೆ ವೀರಶೈವಲಿಂಗಾಯತ ಸಮಾಜದ ಮುಖಂಡರುಗಳಾದ ಮೆಣಸೆ ಆನಂದ,ಕಮದೂರು ರಾಜಶೇಖರ್, ಹೆಚ್.ಎಸ್.ರವಿ ಹಾಲುಗುಡ್ಡೆ, ನೆವಟೂರು ದೇವೇಂದ್ರಪ್ಪಗೌಡ, ಯೋಗೇಂದ್ರಗೌಡ, ಜಿ.ಡಿ ಮಲ್ಲಿಕಾರ್ಜುನ, ಕಳಸೆ ಗಂಗಾಧರಗೌಡ ಒತ್ತಾಯಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರುಗಳು ಹಾಲಪ್ಪನವರು ಹೊಸನಗರ-ಸಾಗರ-ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಲ್ಲದೆ ಶಾಸಕರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು ಜಾತಿ ಭೇದ ಭಾವ…

Read More