Headlines

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ಒಕ್ಕಲಿಗರ ಸಂಘದ ಚುನಾವಣೆ ಸಿರಿಬೈಲ್ ಧರ್ಮೇಶ್ ಮುನ್ನಡೆ : ಗೆಲುವು ಬಹುತೇಕ ಖಚಿತ

ರಾಜ್ಯ ಒಕ್ಕಲಿಗರ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶದ ಮೂರನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಮೂರನೇ ಸುತ್ತಿನಲ್ಲಿ ಧರ್ಮೇಶ್ ಸಿರಿ ಬೈಲ್ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನಲ್ಲಿ ಎಸ್ ಕುಮಾರ್ ಮುನ್ನಡೆ ಪಡೆದಿದ್ದ ಎಸ್ ಕುಮಾರ್ ಮೂರನೇ ಸುತ್ತಿನಲ್ಲಿ ಹಿನ್ನಡೆ ಆಗಿದೆ. ಎರಡನೇ ಸುತ್ತಿನಲ್ಲಿ 2436 ಮತ ಪಡೆದಿದ್ದ ಕುಮಾರ್ ಮೂರನೇ ಸುತ್ತಿನಲ್ಲಿ 2912 ಮತ ಪಡೆದುಕೊಂಡಿದ್ದಾರೆ. ಅದರಂತೆ ಧರ್ಮೇಶ್ ಸಿರಿಬೈಲ್ 3265 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದ್ದಾರೆ. ಧರ್ಮೇಶ್ ಅವರು ನಾಲ್ಕನೇ ಸುತ್ತಿನಲ್ಲಿಯೂ ಹೆಚ್ಚು…

Read More

ಶಿವಮೊಗ್ಗ ವಿಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ರಿಪ್ಪನ್ ಪೇಟೆಯಲ್ಲಿ ವಿಜಯೋತ್ಸವ

ರಿಪ್ಪನ್ ಪೇಟೆ : ಭಾರಿ ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಡಿ ಎಸ್ ಅರುಣ್ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ವಿನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರ ಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಾಧ್ಯಕ್ಷ ಅಮಿತ್‌ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ಕಟೀಲ್‌, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ,ಶಾಸಕ ಹರತಾಳು ಹಾಲಪ್ಪ ಅವರ ಪರ ಜೈಕಾರಗಳನ್ನು ಕೂಗುತ್ತಾ,ಪಟಾಕಿ ಸಿಡಿಸುವ ಮೂಲಕ…

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More

ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ

ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…

Read More

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…

Read More

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್ :

2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣ ಧ್ವಜವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌…

Read More

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More