ಐತಿಹಾಸಿಕ ಕಲ್ಯಾಣೇಶ್ವರ ದೇವಾಲಯದ ನೂತನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆಗೆ ಕ್ಷಣಗಣನೆ! ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವ ಶ್ರೀ ಕಲ್ಯಾಣೇಶ್ವರ

ಹೊಸನಗರ :ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಮೀಪ ವಾರಂಬಳ್ಳಿ ಯ ಸರಿಸುಮಾರು ಎಂಟು, ಮತ್ತು ಹತ್ತನೇ ಶತಮಾನದ  ಐತಿಹಾಸಿಕ ಸುಪ್ರಸಿದ್ಧ  ಶಿವನ ಆಲಯ ಕಲ್ಯಾಣಿ ಶ್ವರ ದೇವಸ್ಥಾನದ ಸಪರಿವಾರ ಕಲ್ಯಾಣಿಶ್ವರನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಫೆಬ್ರವರಿ 2ರಂದು ಪುನರ್ ಪ್ರತಿಷ್ಠಾಪನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು  ಮರುದಿನ ಬ್ರಹ್ಮಕಲಶೋತ್ಸವ ಹಾಗೂ ಪೂರ್ಣಾಹುತಿಯನ್ನು ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳಿಂದ ನೆರವೇರಲಿದೆ.


ದೇವಾಲಯದ ಐತಿಹಾಸಿಕ ಹಿನ್ನೆಲೆ :

ದೇವಸ್ಥಾನದ ಐತಿಹಾಸಿಕ ಹಿನ್ನೆಲೆ ಕುರಿತು ಇತಿಹಾಸಕಾರರಾದ ಅಂಬ್ರಯ್ಯ ಮಠ ಹೇಳುವಂತೆ::ಹೊಸನಗರದ ಪುಟ್ಟ ಪ್ರಕೃತಿಯ ಮಧ್ಯೆ ಇರುವ  ವಾರಂಬಳ್ಳಿ ಎಂಬುದೊಂದು ಹಳ್ಳಿ.ಇದು ಹೊಸನಗರದಿಂದ ಸರಿಸುಮಾರು ಎಂಟು ಕಿಲೋಮೀಟರ್  ದೂರದಲ್ಲಿದೆ.ಜಯನಗರವನ್ನು ಬಳಸಿಕೊಂಡು ತೀರ್ಥಹಳ್ಳಿಗೆ ಹೋಗುವ ರಾಜ್ಯ ರಸ್ತೆಯಿಂದ ಸುಮಾರು 1km ಕ್ರಮಿಸಿದರೆ ಮಠದಹಕ್ಲು ಎಂಬ ಜಾಗ ಸಿಕ್ಕುತ್ತದೆ.ಪೂರ್ವಕ್ಕೆ ಈರಗೋಡು ಪಶ್ಚಿಮಕ್ಕೆ ರಾಮಚಂದ್ರಪುರ ಮಠ,ದಕ್ಷಿಣಕ್ಕೆ ಕೊಳಗಿ-ಗೊರಗೋಡು ಉತ್ತರಕ್ಕೆ ಬಾವಿಕೇವಿ ಗಡಿಗಳನ್ನು ಹೊಂದಿರುವ ಮಠದ ಹಕ್ಲುವಿನಲ್ಲಿ  ಒಂದು ಚಿಕ್ಕ ದೇವಾಲಯ ಸಿಕ್ಕುತ್ತದೆ.ಜಂಬಿಟ್ಟಿಗೆ ಕಲ್ಲುಗಳಿಂದ ನಿರ್ಮಿತವಾಗಿರುವ ಈ ದೇವಾಲಯವು 4 ಅಡಿ ಉದ್ದ 4 ಅಡಿ ಅಗಲದ ಚಚ್ಚೌಕದಲ್ಲಿದೆ.ಕ್ರಿ.ಶ 8ನೇ ಶತಮಾನದಷ್ಟು ಪ್ರಾಚೀನವಾದ ದಿವ್ಯ ಶಿವಲಿಂಗುವಿರುವ ಈ ದೇವಾಲಯಕ್ಕೆ ಶ್ರೀ ಕಲ್ಯಾಣೇಶ್ವರ ಎಂದು ಸ್ಥಳೀಯರು ಕರೆಯುತ್ತಾರೆ.ಮದುವೆಯಾಗದ ಗಂಡು ಹಾಗೂ ಹೆಣ್ಣು ಮಕ್ಕಳು ತಮಗೆ ಒಳ್ಳೆಯ ಹೆಣ್ಣು/ಗಂಡು ಸಿಕ್ಕುವಂತಾಗಲಿ ಎಂದಿಲ್ಲಿ ಬೇಡಿಕೊಳ್ಳುತ್ತಾರೆ.


ತಮ್ಮ ಬೇಡಿಕೆಗೆ ಸಾಕ್ಷಿಯಾಗಿ ಹಲವಾರು ರೀತಿಯಲ್ಲಿ ಹರಕೆಯನ್ನೂ ಹೊತ್ತು ಹೋಗುತ್ತಾರೆ.”ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವುದರಿಂದ ಈ ದೇವರಿಗೆ ಶ್ರೀ ಕಲ್ಯಾಣೇಶ್ವರ ಎಂದೇ ಪ್ರತೀತಿ ಇದೆ”.ಮಕ್ಕಳಿಲ್ಲದವರು ತಮಗೆ ಮಕ್ಕಳಾಗಲಿ ಎಂದು ಪ್ರಾರ್ಥಿಸುತ್ತಾರೆ.ತಮ್ಮ ಕುಟುಂಬದಲ್ಲಿ ಆಗಿಹೋದ/ಆಗಲಿರುವ ಸಮಸ್ಯೆಗಳನ್ನು,ಕುಂದುಕೊರತೆಗಳನ್ನು ಬೇರೊಬ್ಬರಿಂದ ತಮಗಾದ ಕಷ್ಟಕ್ಕೆ,ನಷ್ಟಕ್ಕೆ ಪರಿಹಾರವನ್ನು ಕೇಳಿ ಬಂದಿಲ್ಲಿ ಪ್ರಾರ್ಥಿಸುತ್ತಾರೆ.ಕೇವಲ ಪ್ರಾರ್ಥಿಸುವುದು ಮಾತ್ರವಲ್ಲ ಆ ಕುರಿತಂತೆ ಒಂದು ಗಂಟೆಯನ್ನೂ ಕಟ್ಟಿ ಹೋಗುತ್ತಾರೆ.ಭಕ್ತರ ಕೇಳಿಕೆ ಹುಸಿಯಾಗುವುದಿಲ್ಲ.ಆತ್ಮ ಸಾಕ್ಷಿಯಾಗಿ ಕೇಳಿದರೆ ಕೊಡಬಲ್ಲ ದೇವರು ಶ್ರೀ ಕಲ್ಯಾಣೇಶ್ವರ ಎನ್ನುತ್ತಾರೆ ಇಲ್ಲಿಯ ಭಕ್ತಾದಿಗಳು.


ಇಂತ ಹೇಳಿಕೆಗಳು,ಕೇಳಿಕೆಗಳು ಇಂದಿನವಲ್ಲ,ಹಿಂದಿನಿಂದಲೂ ಇಲ್ಲಿ ನಡೆದುಕೊಂಡು ಬಂದಿದೆ ಕ್ರಿ.ಶ.8ನೇ ಶತಮಾನದಿಂದ ಈ 21ನೇ ಶತಮಾನದುದ್ದಕ್ಕೂ ಈ ದೇವಾಲಯಕ್ಕೆ ಭಕ್ತಾದಿಗಳು ಹರಕೆ ಹೊತ್ತಿದ್ದಾರೆ,ಪೂಜಿಸುತ್ತ ಬಂದಿದ್ದಾರೆ.

ಬಿದನೂರು ರಾಜಧಾನಿ ಆಗಿದ್ದ ಕಾಲದಲ್ಲಿ ಅಂದರೆ 1500-1763ರ ವರೆಗೂ ಈ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಳದಿ ನಾಯಕರ ಪ್ರಭಾವ ಸಾಕಷ್ಟು ಇತ್ತುಕೆಳದಿ ಸಂಸ್ಥಾನದ ಕಾಲದಲ್ಲಿಯಂತೂ(1618-1763)ವಿಶೇಷ ಪೂಜೆ, ಹೋಮ-ಹವನಗಳು ಉತ್ಸವಗಳು ಇಲ್ಲಿ ನಡೆಯುತ್ತಿದ್ದವು.ಏನೇ ಇರಲಿ ಕಲ್ಯಾಣೇಶ್ವರ ಎಂಬ ಈ ಪ್ರಾಚೀನ ದೇವಾಲಯವು ಹಿಂದಿನಿಂದಲೂ ಪ್ರಸಿದ್ಧವಾಗಿತ್ತೆಂಬುದರಲ್ಲಿ ಎರಡು ಮಾತಿಲ್ಲ.ಹಾಗೂ ಇತ್ತೀಚಿಗೆ ಅಲ್ಲಿಯೇ ಸಿಕ್ಕ ಅತ್ಯಂತ ಚಿಕ್ಕದು ಆದರೆ ಕಲಾತ್ಮಕತೆಯಿಂದ ಕೂಡಿದ ಶ್ರೀವೀರಭದ್ರನ ಮೂರ್ತಿಯೂ ಇಲ್ಲಿಯೇ ಇದೆ.ಹಲವಾರು ನಾಗರ ಕಲ್ಲುಗಳು,ಲಿಂಗಮುದ್ರೆ ಕಲ್ಲುಗಳು ಇಲ್ಲಿವೆ.

ಪ್ರಕೃತಿ ಮಧ್ಯದಲ್ಲಿರುವ ಈ ದೇವಸ್ಥಾನಕ್ಕೆ  ನೀವು ಕೂಡ ಒಮ್ಮೆ ಭೇಟಿ ನೀಡಿ.

ಸ್ಥಳ: ಹೊಸನಗರ ನಗರ ಜಯನಗರ   ರಾಜ್ಯಹೆದ್ದಾರಿ ತೀರ್ಥಹಳ್ಳಿ ಮಾರ್ಗವಾಗಿ ವಾರಂಬಳ್ಳಿ ಯಲ್ಲಿದೆ





ಮಾಹಿತಿ :ಅಜಿತ್ ಗೌಡ ಬಡೇನಕೊಪ್ಪ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

7 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

11 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

11 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

23 hours ago

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…

1 day ago

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…

1 day ago