ಗ್ರಾಮೀಣ ಭಾಗದ ಬಡ ಜನತೆ ಹಾಗೂ ನಿರ್ಗತಿಕರು ತಮ್ಮ ಸ್ವಂತ ವಾಸದ ಮನೆಯಲ್ಲಿ ಬದುಕಲಿ ಎಂಬ ಸದುದ್ದೇಶದಿಂದ ಸರಕಾರ ಆಶ್ರಯ ಯೋಜನೆ ಜಾರಿಗೊಳಿಸಿದ್ದರು ಸಹ ಗ್ರಾಮಾಡಳಿತ ನಿರ್ಲಕ್ಷದಿಂದ ಆಶ್ರಯ ಮನೆಗಾಗಿ ಕಳೆದ 25 ವರ್ಷಗಳಿಂದ ಮಹಿಳೆಯೊಬ್ಬರಿಗೆ ಅಲೆದಾಡಿಸುತ್ತಿದೆ.
ಹುಂಚ ಹೋಬಳಿಯ ಅಳಲೆ ಕೊಪ್ಪ ಗ್ರಾಮದ ಮಹಿಳೆ ಇಂದಿರಾ ಎಂಬುವರು ಸಾವಿರಾರು ಬಾರಿ ಗ್ರಾಮಪಂಚಾಯತಿಗೆ ಅಲೆದರು ಸಹ ಅಲ್ಲಿನ ಗ್ರಾಮಾಡಳಿತ ಇದುವರೆಗೂ ಬಡ ಮಹಿಳೆಯ ಮೇಲೆ ಯಾಕೋ ಕರುಣೆಯನ್ನು ತೋರಿಸಿಲ್ಲ.
ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಗ್ರಾಮಾಡಳಿತದ ಜವಾಬ್ದಾರಿ ಆದರೆ ಹುಂಚಾ ಗ್ರಾಮ ಪಂಚಾಯತಿಯಲ್ಲಿ ಈ ಕಾರ್ಯಾಚರಣೆ ಕುಂಠಿತವಾದಂತೆ ಕಾಣಿಸುತ್ತಿದೆ.
ಇಂದಿರಾರವರು ಅಳಲೆಕೊಪ್ಪ ಗ್ರಾಮದಲ್ಲಿ ವಿಕಲಚೇತನ ವನ್ನು ಹೊಂದಿರುವ ಪತಿ ಹಾಗೂ ಮಗಳ ಜೊತೆ ಟಾರ್ಪಲಿನ್ ನಿಂದ ನಿರ್ಮಿತವಾದ ಹರಕಲು ಮುರುಕಲು ಗುಡಿಸಿನಲ್ಲಿ ವಾಸಮಾಡುತ್ತಾ ಕೂಲಿನಾಲಿ ಮಾಡಿ ಜೀವನ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಯವರು ಮನೆಗಾಗಿ ಇಂದು ಬನ್ನಿ ನಾಳೆ ಬನ್ನಿ ಎಂದು ಅಲೆದಾಡಿ ಸುತ್ತಿದ್ದಾರೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅಳಲೆಕೊಪ್ಪ ವಾಸಿ ಇಂದಿರಾ ಸುಮಾರು ಇಪ್ಪತೈದು ವರ್ಷಗಳಿಂದ ಆಶ್ರಯ ಯೋಜನೆಯಲ್ಲಿ ಮನೆಗಾಗಿ ಅರ್ಜಿ ಸಲ್ಲಿಸಿರುವ ನಮ್ಮ ಕುಟುಂಬಕ್ಕೆ ಯಾವುದೇ ರೀತಿಯಾಗಿ ಸರ್ಕಾರದ ಯೋಜನೆಯನ್ನು ನೀಡುವಲ್ಲಿ ಇಲ್ಲಿನ ಗ್ರಾಮ ಪಂಚಾಯತ್ ವಿಫಲವಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿಇದೆಂತ ಹೀನಾಯ ಸ್ಥಿತಿ :
ಸರಳ ಸಜ್ಜನಿಕೆಯ ಮೂಲಕ ರಾಜ್ಯದಲ್ಲಿ ಮತ್ತು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ರಾಜ್ಯ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರ ಸಾಮ್ರಾಜ್ಯದಲ್ಲಿ ಮಹಿಳೆಯೊಬ್ಬರಿಗೆ ಬಂದಿರುವ ಹೀನಾಯ ಸ್ಥಿತಿಯ ಬಗ್ಗೆ ಗ್ರಾಮದ ಜನತೆ ಆಕ್ರೋಶಗೊಂಡಿದ್ದಾರೆ.
ಇನ್ನಾದರೂ ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ರವರು ಕರುಣೆ ತೋರಿಸಬಹುದೇ ಎಂದು ಕಾದುನೋಡಬೇಕು.
ಮನೆ ನೀಡುತ್ತೇನೆ ಎಂದು ಭರವಸೆ ನೀಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ :
ಅಳಲೆ ಕೊಪ್ಪ ಗ್ರಾಮದ ಇಂದಿರಾ ರವರಿಗೆ ಅಲೆದಾಡಿ ಸುತ್ತಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಪ್ರಶ್ನೆ ಮಾಡಿದಾಗ ಮಾತನಾಡಿದ ಹುಂಚಾ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಮೇಶ್ ಮುಂಬರುವ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಇಂದಿರಾರವರಿಗೆ ಆಶ್ರಯ ಮನೆ ಯೋಜನೆ ಅಡಿಯಲ್ಲಿ ಮನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ.
ಭರವಸೆ ಕೇವಲ ಭರವಸೆಯಾಗಿ ಉಳಿಯದೇ ಕಾರ್ಯರೂಪಕ್ಕೆ ಬಂದು ಬಡ ಮಹಿಳೆಗೆ ಮನೆ ನಿರ್ಮಾಣವಾಗಲಿ ಎನ್ನುವುದೇ ಪೋಸ್ಟ್ ಮ್ಯಾನ್ ನ್ಯೂಸ್ ನ ಆಶಯ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್