ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು .


ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ ಕಾಮಗಾರಿ ಗುದ್ದಲಿಪೂಜೆ, ಶಾಖವಳ್ಳಿ – ಕೋಡೂರು ರಸ್ತೆ, ಹಿಂಡ್ಲೆಮನೆ ಸರ್ಕಾರಿ ಶಾಲೆಯ ಹೆಚ್ಚುವರಿ ಕೊಠಡಿ, ಕೆ.ಕುನ್ನೂರು ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ 94ಸಿ ಅಡಿ 23 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ  ಅವರು ದೇಶದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿಯವರ ಸರಕಾರ ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿಯೂ ಜನರ ಜೀವನದ ಬಗ್ಗೆ ಹೆಚ್ಚು ಆದ್ಯತೆ ನೀಡಿ ದೇಶದಲ್ಲಿಯೆ 150ಕೋಟಿ ಜನರಿಗೆ ಉಚಿತ ಕೊರೊನಾ ಲಸಿಕೆ ನೀಡುವ ಮೂಲಕ 5ಲಕ್ಷ ಕೋಟಿ ಹಣ ವ್ಯಯ ಮಾಡಿ ಕೊರೊನಾ ಮುಕ್ತ ದೇಶವನ್ನಾಗಿ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಗಲಿರುಳು ಶ್ರ ಮಿಸುತ್ತಿದೆ ಎಂದರು.


ದಲಿತರ ಸಾಮಾನ್ಯ ಮಕ್ಕಳಿಗೆ ವಿದ್ಯೆ ಕೊಟ್ಟರೆ ಬದುಕಿರುವವರೆಗೂ ಇರುತ್ತದೆ ಮಕ್ಕಳಿರುವಾಗಲೇ ಸಂಸ್ಕಾರವಿತ ಬದುಕಿಗೆ ಶಿಕ್ಷಣ ಅಗತ್ಯತೆ ಇದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣದ ಪ್ರಗತಿಗೆ ಹೆಚ್ಚು ಆದ್ಯತೆ ನೀಡಿವೆ ಎಂದರು.


ಸಾಗರ ಕ್ಷೇತ್ರದ ಶಾಸಕ,ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಮಾತನಾಡಿ, ವಸತಿ ಶಾಲೆಗಳು ಸದಾ ಕ್ರಿಯಾಶೀಲ ಚಟುವಟಿಕೆ ಕೇಂದ್ರಗಳಾಗಬೇಕು. ಈಗಾಗಲೇ ಬಗರು ಹುಕಂ ಉಪಸಮಿತಿಯನ್ನು ರಚಿಸಲಾಗಿದ್ದು ಉಪಸಮಿತಿಯ ವರದಿಯನ್ನಾಧರಿಸಿ ಕಾನು ಕರಾಬ್, ಅರಣ್ಯ, ಗೋಮಾಳ, ಡೀಮ್ಡ್ ಫಾರೆಸ್ಟ್ ಹೀಗೆ ಅರಣ್ಯ ಇಲಾಖೆಯವರ ಜಾಗದಿಂದಾಗಿ ಸಾಗುವಳಿದಾರರು ಹಕ್ಕು ಪತ್ರಕ್ಕಾಗಿ ಪರದಾಡುವಂತಾಗಿದೆ. ಈ ಬಗ್ಗೆ ಕಾನೂನಿನ ತೊಡಿಕಿನಿಂದಾಗಿ ಮಂಜುರಾತಿ ಪತ್ರ ನೀಡಲು ಅಡಚಣೆಯಾಗುತ್ತಿದೆ. ಈ ಹಿಂದಿನ ಸರ್ಕಾರಗಳು ಬಗರ್ ಹುಕುಂ ಹೆಸರಿನಲ್ಲಿ ಕಾಲ ಕಳೆದರೆ ಹೊರತು ಯಾವುದನ್ನು ಅನುಷ್ಠಾನ ಮಾಡಲು ತಯಾರಿರಲಿಲ್ಲ. ಈಗಿನ ಸರ್ಕಾರದ ಮುಖ್ಯಮಂತ್ರಿಗಳು, ಕಂದಾಯ ಸಚಿವರ ನೇತೃತ್ವದಲ್ಲಿ ಉಪಸಮಿತಿಯನ್ನು ರಚಿಸಲಾಗಿದ್ದು ಮುಂದಿನ ಒಂದೆರಡು ತಿಂಗಳಲ್ಲಿ ಅರಣ್ಯ ಒತ್ತುವರಿ ಮತ್ತು ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆಗೆ ಪರಿಹಾರ ದೊರಯುವುದೆಂದು ಆಶಾಭಾವನೆ ವ್ಯಕ್ತಪಡಿಸಿದರು.

ಇದೇ ಸಂಧರ್ಭದಲ್ಲಿ 23 ಫಲಾನುಭವಿಗಳಿಗೆ 94 c ಹಕ್ಕುಪತ್ರವನ್ನು ವಿತರಿಸಲಾಯಿತು.


ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಸುನಂದಮ್ಮ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ನಿಗಮದ ನಿರ್ದೇಶಕ ಎನ್.ಆರ್.ದೇವಾನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗಾರಾಜ್.ಕೆ, ತಹಶೀಲ್ದಾರ್ ಎಸ್.ವಿ.ರಾಜೀವ್, ತಾ.ಪಂ.ಇಒ ಸಿ.ಆರ್.ಪ್ರವೀಣ್‌ಕುಮಾರ್, ಗ್ರಾ.ಪಂ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago