ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು.


ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು ಮೇಲೆ ಏರಿ ಕುಳಿತು ತನ್ನ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ ಘಟನೆ ಇಂದು ನಡೆಯಿತು.


ವಿಷಯ ತಿಳಿಯುತ್ತಿದ್ದಂತೆ ಟವರ್ ಬಳಿ ಜನಸಾಮಾನ್ಯರು ನೆರೆದು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಊರಿನ ಗ್ರಾಮಸ್ಥರೆಲ್ಲಾ ಕೆಳಗೆ ಇಳಿಯುವಂತೆ ಎಷ್ಟೇ ಬಾರಿ ಮನವಿ ಮಾಡಿದರು ಕೇಳದೇ ಹಠ ಹಿಡಿದು ತಹಶೀಲ್ದಾರ್ ಸ್ಥಳಕ್ಕೆ ಬರುವವರೆಗೂ ಇಳಿಯುವುದಿಲ್ಲ ಎಂದು ಹೇಳಿದ್ದಾನೆ.

ಈ ಸಂಧರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಿಪ್ಪನ್ ಪೇಟೆ ಪಿಎಸ್ ಐ ಶಿವಾನಂದ ಕೋಳಿ ರವರು ಟವರ್ ಹತ್ತಿ ಕುಳಿತಿದ್ದ ಕೃಷ್ಣಮೂರ್ತಿ ಯನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಸುಮಾರು 20 ನಿಮಿಷಗಳು ಮಾತನಾಡಿ ನ್ಯಾಯ ದೊರಕಿಸುವ ಭರವಸೆ ನೀಡಿದ ನಂತರ ಕೆಳಗಿಳಿಯಲು ಒಪ್ಪಿದ್ದಾನೆ.

ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೆಳಗೆ ಇಳಿಯುತ್ತಿದ್ದ ಕೃಷ್ಣಮೂರ್ತಿ ಸುಸ್ತಾಗುತ್ತಿರುವುದನ್ನು ಮನಗಂಡು 50 ಅಡಿ ಮೇಲೇರಿ ಕೃಷ್ಣಮೂರ್ತಿಗೆ ನೀರು ಕುಡಿಸಿ ನಂತರ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಆತನನ್ನು ಹತ್ತಿರದ ಗ್ರಾಮ ಪಂಚಾಯತಿ ಕಛೇರಿಗೆ ಕರೆದುಕೊಂಡು ಹೋಗಲಾಯಿತು.

ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ವಿ ಎಸ್ ರಾಜೀವ್ ಕೃಷ್ಣಮೂರ್ತಿಯವ ಸಮಸ್ಯೆಯನ್ನು ಆಲಿಸಿ ನಂತರ ಕೃಷ್ಣಮೂರ್ತಿಗೆ ಸಂಬಂಧಿಸಿದ ಸ್ಥಳ ಪರಿಶೀಲನೆ ನಡೆಸಿ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.


ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಸಹಾಯಕ ಠಾಣಾಧಿಕಾರಿ ಕೆ.ಟಿ ರಾಜಪ್ಪ, ಕೆ‌‌.ಹೆಚ್ ರಾಜೇಶ್, ಅಗ್ನಿಶಾಮಕರಾದ ಮಂಜುನಾಥ್ ಬಿ. ಭೀಷ್ಮಾಚಾರಿ ಕಮ್ಮಾರ್, ಶಿವರಾಜ್ ಮೊದಲಾದವರು ಠಾಣಾಧಿಕಾರಿ ಹಾಲೇಶಪ್ಪನವರ ಮಾರ್ಗದರ್ಶನದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸರ್ಕಲ್ ಇನ್ಸ್‌ಪೆಕ್ಟರ್ ಜಿ.ಕೆ ಮಧುಸೂದನ್, ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿ.ಆರ್ ಪ್ರವೀಣ್, ಕೋಡೂರು ಪಿಡಿಒ ಪ್ರವೀಣ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಹಾಜರಿದ್ದರು.


ಈ ಘಟನೆಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

12 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

19 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago