ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಮಕ್ಕಳು ಮಾತ್ರವೇ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 146 ಮಕ್ಕಳು ಮಾತ್ರವೇ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ದರ 19-01-2022ರಂತೆ ಶೇ.18.08ರಷ್ಟಿದೆ. ಪೀಕ್ ಸಂದರ್ಭದಲ್ಲಿ ಶೇ.33ರಷ್ಟು ಇತ್ತು. ಈಗ 20.09ರಷ್ಟಕ್ಕೆ ಬಂದಿದೆ ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರೋ ಕಾರಣದಿಂದಾಗಿ ಜನವರಿ 31ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಅನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.
ಇನ್ನೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮದುವೆಗೆ ಅವಕಾಶ, ಓಪನ್ ಸ್ಥಳದಲ್ಲಿ 300ಕ್ಕೆ ಅವಕಾಶ ನೀಡಲಾಗಿದೆ. ಕಚೇರಿ ಕೆಲಸದ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸೇವೆ ಬಂದ್ ಆಗಿತ್ತು. ಆ ಸೇವೆಗಳನ್ನು ಪುನರಾರಂಭಿಸೋದಕ್ಕೆ ಅವಕಾಶ ನೀಡಲಾಗಿದೆ. ಅರ್ಚನೆ, ಮಂಗಳಾರತಿಗೆ ಅವಕಾಶ ನೀಡಲಾಗಿದೆ. ಶೇ.50ರ ಜನರ ಮುತಿ ಮುಂದುವರೆಯಲಿದೆ ಎಂದರು.
ಜಾತ್ರೆ, Rally, ಧರಣಿ, ಪ್ರತಿಭಟನೆ ಸೇರಿದಂತೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಜಿಮ್ ಗಳಿಗೆ ಶೇ.50ರ ಮಿತಿಯನ್ನು ನಿಗದಿ ಪಡಿಸಲಾಗಿದೆ. ಸ್ಪೋರ್ಟ್ಸ್ ಸ್ಟೇಡಿಯಂಗಳ ಮಿತಿ ಶೇ.50ರಷ್ಟು ಮುಂದುವರೆಸಲಾಗಿದೆ. ಮಹಾರಾಷ್ಟ್ರಾ, ಕೇರಳ, ಗೋವಾದಿಂದ ಬರೋರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್