ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು.
ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ.
ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್ ಹೆಸರನ್ನು ಪುನರ್ ಬರೆಸುವುದಾಗಿ ಭರವಸೆ ನೀಡಿ ಸಂಪೂರ್ಣ ಬಿಳಿ ಬಣ್ಣ ಬಳಿದಿತ್ತು.
ಆದರೆ ಬಿಳಿ ಬಣ್ಣ ಬಳೆದು ತಿಂಗಳು ಕಳೆದರೂ ಸಹ ಗ್ರಾಮಾಡಳಿತ ಯಾವುದೇ ಹೆಸರನ್ನು ಬರೆಯಿಸಲು ಹೋಗದೆ ಜಾಣ ಕುರುಡು ಪ್ರದರ್ಶಿಸುತ್ತಿರುವುದರಿಂದ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ರಾಜ್ಯ ಕಂಡ ಅಪ್ರತಿಮ ನಟನಿಗೆ ಅಗೌರವ ತೋರಿದ ಗ್ರಾಮ ಪಂಚಾಯಿತಿ ವ್ಯವಸ್ಥೆಗೆ ಹಾಗೂ ಚುನಾಯಿತ ಜನಪ್ರತಿನಿಧಿಗಳಿಗೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.
ಇತ್ತಕಡೆ ಗ್ರಾಮಪಂಚಾಯಿತಿಯ ಆಡಳಿತ ವ್ಯವಸ್ಥೆಯು ಯಾರದೋ ಮುಲಾಜಿಗೆ ಒಳಗಾಗಿ ಇದೆಯೋ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪುನೀತ್ ರಾಜಕುಮಾರ್ ಹೆಸರನ್ನು ಬರೆಸಲು ಸಾಧ್ಯವಾಗಲಿಲ್ಲದಿರುವುದು ಇವರ ಇಚ್ಚಾ ಶಕ್ತಿಯ ಕೊರತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಇನ್ನಾದರೂ ಗ್ರಾಮಾಡಳಿತ ಎಚ್ಚೆತ್ತುಕೊಂಡು ಪುನೀತ್ ರಾಜಕುಮಾರ್ ನಾಮ ಫಲಕಕ್ಕೆ ಅವರ ಹೆಸರನ್ನು ಪುನರ್ ಬರೆಯಿಸಿ ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ರವರಿಗೆ ಗೌರವ ಸೂಚಿಸಬೇಕಾಗಿದೆ.
- ಈ ಘಟನೆಯ ಸಂಪೂರ್ಣ ವೀಡಿಯೋ ಇಲ್ಲಿದೆ ವೀಕ್ಷಿಸಿ 👇👇👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್