ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ.
ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.