ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.
ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು ಹವಾಮಾನ ವೈಫಲ್ಯದ ಹಿನ್ನಲೆಯಲ್ಲಿ ವಿಮಾನ ಪ್ರಯಾಣವನ್ನು ರದ್ದುಗೊಳಿಸಲಾಗಿತ್ತು.ರಸ್ತೆ ಮೂಲಕ ಪಂಜಾಬಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನದ ವೇಳೆ ಭದ್ರತಾ ವೈಫಲ್ಯ ಆಗಿರೋದು ಅಕ್ಷಮ್ಯ ಅಪರಾಧ. ಪ್ರಧಾನಿ ಸ್ಥಾನಕ್ಕೆ ಗೌರವ ನೀಡಿಯಾದ್ರೂ ಸೂಕ್ತ ಭದ್ರತೆ ನೀಡಬೇಕಿತ್ತು. ಕಾಂಗ್ರೆಸ್ ಸರ್ಕಾರ ತನ್ನ ಸಣ್ಣತನದಿಂದ ತನ್ನ ಮರ್ಯಾದೆ ಹಾಳು ಮಾಡಿಕೊಂಡಿದೆ. ಕೂಡಲೇ ಪಂಜಾಬ್ ಮುಖ್ಯಮಂತ್ರಿ ಹಾಗೂ ಪಂಜಾಬ್ ಗೃಹ ಸಚಿವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
ನಂತರ ಮಾತನಾಡಿದ ರಿಪ್ಪನ್ ಪೇಟೆ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ಈ ಪ್ರತಿಭಟನೆ ದೇಶದ ಪ್ರಥಮ ಪ್ರಜೆಗೆ ಆದ ಅವಮಾನದ ವಿರುದ್ಧವಾಗಿದೆ ಪ್ರಪಂಚವೇ ಮೆಚ್ಚುವ ನಮ್ಮ ದೇಶದ ಪ್ರಧಾನಿಗೆ ಅಗೌರವ ತೋರುವ ಮೂಲಕ ಕಾಂಗ್ರೆಸ್ ಪಕ್ಷ ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶಿಸಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎನ್ ಸತೀಶ್, ಸುರೇಶ್ ಸಿಂಗ್ ,ಸುಧೀಂದ್ರ ಪೂಜಾರಿ,ಜಿ ಡಿ ಮಲ್ಲಿಕಾರ್ಜುನ,ಮಹಾಲಕ್ಷ್ಮಿ ಅಣ್ಣಪ್ಪ, ಉಮಾ ಸುರೇಶ್, ರಿಯಾಜ್, ಜಂಬಳ್ಳಿ ಗಿರೀಶ್, ರಾಘವೇಂದ್ರ, ಹೂವಪ್ಪ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್