ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು.


ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ ಒಂದು ರೂಪಾಯಿ ಸಹ ಸ್ವೀಕರಿಸಿಲ್ಲ ಎಂದು ತಮ್ಮ ಬೆಂಬಲಿಗರಿಂದ ಪತ್ರಿಕಾಗೋಷ್ಠಿ ನಡೆಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವ ಶಾಸಕರು ಲಾರಿ ಮಾಲೀಕರನ್ನು ಮನೆಗೆ ಕರೆಸಿ ನೀವು ಬೇಳೂರು ವಿರುದ್ಧ ಪತ್ರಿಕಾ ಹೇಳಿಕೆ ನೀಡದಿದ್ದರೇ ನಿಮಗೆ ಆಕ್ರಮವಾಗಿ ಮರಳು ಹೊಡೆಯಲು ಬೀಡುವುದಿಲ್ಲ ಎಂದು ತಾಕೀತು ಮಾಡಿದ್ದು ಶಾಸಕರಿಗೆ ಹೆದರಿ ಆಕ್ರಮ ಮರುಳು ದಂಧೆ ಮಾಡುವವರು ನನ್ನ ವಿರುದ್ಧ ಪತ್ರಿಕ ಹೇಳಿಕೆ ನೀಡುತ್ತಿದ್ದಾರೆ ಅವರಿವವರ ಮೂಲಕ ಹೇಳಿಕೆ ನೀಡಿಸುವುದರ ಬದಲು ನಾನು ಸಿಗಂದೂರು ದೇವಸ್ಥಾನ ಬಿಟ್ಟು ಬೇರೆ ಯಾವುದೇ ದೇವಸ್ಥಾನದಲ್ಲಿಯಾದರೂ ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಪ್ರಮಾಣ ಮಾಡುತ್ತೇನೆ ಎಂದರು  ಎಂದರು.

ಸಚಿವ ಈಶ್ವರಪ್ಪ ರವರ ಹೇಳಿಕೆ ಶುದ್ಧ ಸುಳ್ಳು :

ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪನವರು ಮುಂದಿನ ತಿಂಗಳು ತಾಲ್ಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆ ಘೋಷಣೆಯಾಗಲಿದೆ ಎಂದು ಹೇಳಿದ್ದು ಇದು ಶುದ್ಧ ಸುಳ್ಳು. ಈಶ್ವರಪ್ಪನವರ ಮಾತಿಗೆ ಸರ್ಕಾರದಲ್ಲಿ ಯಾವುದೇ ಕಿಮ್ಮತ್ತಿಲ್ಲ. ಚುನಾವಣೆ ನಡೆದರೆ ಖಂಡಿತ ಸೋಲುತ್ತೇವೆ ಎಂಬ ಭಯದಲ್ಲಿ ಚುನಾವಣೆಗಳನ್ನು ಮುಂದುಡುತ್ತಿದ್ದಾರೆ ಎಂದರು.
ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಆಡಳಿತ ಚುಕ್ಕಾಣಿ ಕುಸಿದಿದೆ ಬಿಜೆಪಿ ಎಂಎಲ್‌ಎಗಳಲ್ಲಿ ಹೊಂದಾಣಿಕೆಯಿಲ್ಲ ಅವರವರೆ ಕಚ್ಚಾಟ ನಡೆಸುತ್ತಿದ್ದಾರೆ ಇನ್ನೂ 6ತಿಂಗಳು ಸರ್ಕಾರ ಉಳಿಯುವುದು ಕಷ್ಟ ಎಂದು ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ  ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎರಗಿ ಉಮೆಶ್, ಚಂದ್ರಮೌಳಿ, ಜಯಶೀಲಪ್ಪ ಗೌಡ, ಪಪಂ ಸದಸ್ಯ ಅಶ್ವಿನಿಕುಮಾರ್, ಸಣ್ಣಕ್ಕಿ ಮಂಜು, ಚೇತನ್ ದಾಸ್ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago