ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಜ.19ರಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗ ಜಿಲ್ಲೆಯವರು ಕೆಪಿಸಿಸಿ ಕಚೇರಿ ಬಳಿ ಹಾಜರಿರುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ಬಹಿರಂಗ ಸಭೆ ನಡೆಯುವ ಸ್ಥಳದವರೆಗೆ ನಡೆಯುವ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇವೆ ಎಂದರು.
ಮೇಕೆದಾಟು ಯೋಜನೆಗೆ ಮೊದಲ ಬಾರಿಗೆ ಆಡಳಿತಾತ್ಮಕ ಮಂಜೂರಾತಿ ಕೊಟ್ಟಿದ್ದೇ ಅಂದಿನ ಕಾಂಗ್ರೆಸ್ ಸರ್ಕಾರ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದೆ. ಈ ಯೋಜನೆ ಜಾರಿಯಾದರೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲ 10 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಅನುಕೂಲವಾಗಲಿದೆ. ಸದರಿ ಯೋಜನೆಯಿಂದ 67.15 ಟಿಎಂಸಿ ನೀರು ಸಂಗ್ರಹಿಸಬಹುದಾಗಿದೆ ಹಾಗೂ 400 ಮೇಗವಾಟ್ ವಿದ್ಯುತ್ ಉತ್ಪಾದಿಸಬಹುದಾಗಿದೆ. ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸಬಹುದಾಗಿದೆ. ಮುಂದಿನ 50 ವರ್ಷದವರೆಗೆ ಈ 10 ಜಿಲ್ಲೆಗಳಿಗೆ ಕುಡಿಯವ ನೀರಿನ ಸಮಸ್ಯೆ ಇರುವುದಿಲ್ಲ ಎಂದರು.ಈ ಯೋಜನೆ ಜಾರಿ ವಿಳಂಬವಾಗುತ್ತಿರುವ ಬಗ್ಗೆ ಬಿಜೆಪಿ ಸುಳ್ಳು ಹೇಳುತ್ತಿದೆ. ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ಸಹ ಈ ಯೋಜನೆ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ರೇಖಾ ರಂಗನಾಥ್, ಮೆಹಖ್ ಷರೀಫ್, ಮುಖಂಡರಾದ ಎಲ್.ರಾಮೇಗೌಡ, ವೈ.ಹೆಚ್.ನಾಗರಾಜ್, ಸಿ.ಎಸ್.ಚಂದ್ರಭೂಪಾಲ್, ಶಿವಲಿಂಗ ಮೂರ್ತಿ, ಚಂದ್ರಶೇಖರ್, ಎ.ಬಿ. ಮಾರ್ಟಿಸ್, ಸೌಗಂಧಿಕಾ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್