ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ.
ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ.
ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ಜೊತೆಗೆ ಆಹಾರ ಪದ್ದತಿಯಲ್ಲಿ ಉಂಟಾಗಿರುವ ಬದಲಾವಣೆಯಿಂದ ಇತರ ಆರೋಗ್ಯದ ಸಮಸ್ಯೆಯ ಜೊತೆಗೆ ಹಲ್ಲುಗಳ ಆರೋಗ್ಯದ ನಮಸ್ಯೆಗಳು ಹೆಚ್ಚಾಗಿವೆ.ದಂತ ಚಿಕಿತ್ಸಾಲಯಗಳು ಜನರಿಗೆ ಉತ್ತಮ ಸೇವೆಯನ್ನು ಸಲ್ಲಿಸುವುದರ ಜೊತೆಗೆ ಆರೋಗ್ಯದ ಬಗ್ಗೆ ಜನ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಕಾರ್ಯನಿರ್ವಹಿಸಲಿ ಎಂದು ಹೇಳಿದರು.
ನಂತರ ಮಾತನಾಡಿದ ನಂದಿ ಡೆಂಟಲ್ ಕ್ಲಿನಿಕ್ ನ ಮುಖ್ಯಸ್ಥರಾದ ಡಾ.ಸ್ವರೂಪ್ ಶೆಟ್ಟಿ ಮಾತನಾಡಿ ನಮ್ಮಲ್ಲಿ ರೂಟ್ ಕೆನಾಲ್ ಟ್ರೀಟ್ ಮೆಂಟ್,ಕೃತಕ ದಂತ ಜೋಡಣೆ,ಮಕ್ಕಳ ದಂತ ಚಿಕಿತ್ಸೆ, ವಕ್ರ ದಂತ ಚಿಕಿತ್ಸೆ, ಡೆಂಟಲ್ ಇಂಪ್ಲಾಂಟ್ ,ಹಲ್ಲು ಸ್ವಚ್ಚಗೊಳಿಸಲಾಗುವುದ ಹಾಗೂ ಆಧುನಿಕ ದಂತ ಚಿಕಿತ್ಸೆ ಮತ್ತು ಎಕ್ಸ್ ರೇ ತಂತ್ರಜ್ಞಾನ ಅಳವಡಿಸಲಾಗಿದೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಶಿವಮೊಗ್ಗ ಶರಾವತಿ ಡೆಂಟಲ್ ಕಾಲೇಜಿನ ಡಾ.ಶ್ರೀನಿಧಿ ಹಾಗೂ ಡಾ.ಸುಜಿತ್ ಹಾಗೂ ನಂದಿ ಡೆಂಟಲ್ ಕ್ಲಿನಿಕ್ ನ ಶಿಲ್ಪಾ ಶೆಟ್ಟಿ ಮತ್ತು ರಿಪ್ಪನ್ ಪೇಟೆ ಉದ್ಯಮಿಗಳಾದ ಸಂತೋಷ್ ,ನ್ಯಾಷನಲ್ ಇಬ್ರಾಹಿಂ , ಸಿವಿಲ್ ಇಂಜಿನಿಯರ್ ರಾಘವೇಂದ್ರ,ಯುವ ಉದ್ಯಮಿ ರಹೀಂ ಚಾಲಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್