ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ.
ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್ನ ಸಲ್ಮಾನ್ ಜೊತೆ ವಿವಾಹ 2021ರ ಮೇ 22ರಂದು ವಿವಾಹ ನಡೆದಿತ್ತು. ಈ ವೇಳೆ 90 ಗ್ರಾಂ ಬಂಗಾರ, 3 ಲಕ್ಷ ರೂ. ವರದಕ್ಷಿಣೆ ನೀಡಲು ಸಂತ್ರಸ್ತೆಯ ತಂದೆ ಒಪ್ಪಿದ್ದರು. ಮದುವೆಗೆ ಮುಂಚೆ 2 ಲಕ್ಷ ರೂ. ನಗದು, 4 ಗ್ರಾಂನ ಉಂಗುರ ಹಾಗೂ ಮದುವೆ ಬಳಿಕ 90 ಗ್ರಾಂ ಬಂಗಾರ, ಗೃಹೋಪಯೋಗಿ ವಸ್ತುಗಳನ್ನು ನೀಡಿದ್ದರು.
ಆದರೆ ಬಾಕಿ ಒಂದು ಲಕ್ಷ ರೂ. ವರದಕ್ಷಿಣೆ ನೀಡಿರಲಿಲ್ಲ. ಈ ವಿಚಾರದಲ್ಲಿ ಗಲಾಟೆ ನಡೆದು ಸಂಧಾನದ ಬಳಿಕ ಮದುವೆ ನೆರವೇರಿತ್ತು.ಹಲವು ತಿಂಗಳ ಬಳಿಕ ಸಾಹೀರಾ ಮತ್ತು ಶೌಕತ್ ಖಾನ್ ವರದಕ್ಷಿಣೆ ತರುವಂತೆ ಕಿರುಕುಳ ನೀಡಲಾರಂಭಿಸಿದ್ದರು. ಅದಕ್ಕೆ ಸಲ್ಮಾನ್ಕುಮ್ಮಕ್ಕು ನೀಡುತ್ತಿದ್ದ. ಈ ನಡುವೆ ಕಿಗ್ಗದ ಸಮೀನಾ ಕೂಡ ಕಿರುಕುಳ ನೀಡುತ್ತಿದ್ದರು. ಜತೆಗೆ ಬೆತ್ತಲೆ ವಿಡಿಯೋವನ್ನು ಸ್ನಾೃಪ್ಚಾಟ್ಗೆ ಅಪ್ಲೋಡ್ ಮಾಡುವಂತೆ ಸಲ್ಮಾನ್ ಪದೇ ಪದೇ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ. ಅಪ್ಲೋಡ್ ಮಾಡಿದಿದ್ದರೆ ತನ್ನ ಮೊಬೈಲ್ನಲ್ಲಿರುವ ಬೆತ್ತಲೆ ವಿಡಿಯೋಗಳನ್ನು ಬೇರೆಯವರಿಗೆ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.
ಕಿರುಕುಳ ತಾಳಲಾರದೇ ಸಂತ್ರಸ್ತೆ ಇತ್ತೀಚೆಗೆ ತವರು ಮನೆಗೆ ಬಂದಿದ್ದರು. ಅಲ್ಲಿಗೂ ಬಂದಿದ್ದ ಸಲ್ಮಾನ್ ಪತ್ನಿಗೆ ತಲಾಖ್ ಕೂಡ ನೀಡಿ ಮರಳಿದ್ದ. ಈ ನಡುವೆ ಸಂತ್ರಸ್ತೆಗೆ ಮತ್ತೆ ಕರೆ ಮಾಡಿದ್ದ ಆತ ಬೆತ್ತಲೆ ವಿಡಿಯೋವನ್ನು ಸ್ನಾೃಪ್ಚಾಟ್ಗೆ ಅಪ್ಲೋಡ್ ಮಾಡಬೇಕು. ವರದಕ್ಷಿಣೆ ತರಬೇಕು. ಇಲ್ಲದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂದು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್