ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ
ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್ ವಿಚಾರದಲ್ಲಿ ನಡೆದಿತ್ತು.
ಈಗ ಗೌಸಿಯಾ ಹೋಟೆಲ್ ನಲ್ಲಿ ಇಂದು ರಾತ್ರಿ ನಡೆದಿದ್ದು ಅದೇ ರಿಯಲ್ ಎಸ್ಟೇಟ್ ವಿಚಾರಕ್ಕೆ.  ಒಂದು ತರಹ  ರಿಯಲ್ ಎಸ್ಟೇಟ್ ಉದ್ದಿಮೆಗಳ ಹಾಟ್ ಸ್ಪಾಟ್ ಆಗೋಗಿರುವ ಗೌಸಿಯಾ ಹೋಟೆಲ್ ನಲ್ಲಿ ಮಾಜಿಕಾರ್ಪರೇಟರ್ ರೆಹಮಾನ್ ಅವರ ಮಗ ಶಫಿ ಜಮೀನಿನ ಖರೀದಿ ವಿಚಾರದಲ್ಲಿ  ಜುನೈದ್  ಬಳಿ ಬಂದು ಹಣ ಕೇಳ್ತಾನೆ.
ಮನ್ಸೂರ್ ನ ಸಹೋದರ ಸೈಫುಲ್ಲಾ ಈ ಜುನೈದ್ ನ ಸಂಬಂಧಿಯೂ ಸಹ ಹೌದು, ಯಾವಾಗ ಜುನೈದ್ ಹಣದ ವಿಚಾರ ನನ್ನ ಬಳಿ ಹೇಳಬೇಡ ಯಾರಿಗೆ ನೀನು ವ್ಯವಹಾರ ಮಾಡಿಕೊಂಡಿದ್ಯೋ ಅವರನ್ನ ಕೇಳು ಎಂದು ಹೇಳುತ್ತಾನೆ. ಇಷ್ಟಕ್ಕೆ ಕುಪಿತನಾದ‌ ಶಫಿ ಕೂಗಾಡುತ್ತಾನೆ. ಜುನೈದ್ ಮೇಲೆ ಹಲ್ಲೆ ನಡೆಸುತ್ತಾನೆ.
ಹೊರಗಡೆ ಹೋಗಿ ಸಿದ್ಧಿಕಿಯನ್ನ ಕರೆದುಕೊಂಡು ಬರುತ್ತಾನೆ.  ಸಿದ್ದಕಿ, ಶಫಿ ಹಾಗೂ ಜುನೈದ್ ಮತ್ತು ಸೈಫುಲ್ಲಾ ನಡುವೆ ಗ್ಯಾಂಗ್ ವಾರ್ ಟೈಪು ಮಾರಾಮಾರಿ ನಡೆಯುತ್ತೆ. ಈ ವೇಳೆ ಸ್ಥಳಕ್ಕೆ ಬಂದ ದೊಡ್ಡಪೇಟೆ ಪೊಲೀಸರು ಮಧ್ಯಪ್ರವೇಶದಿಂದ ಜಗಳ ತಣ್ಣಗಾಗುತ್ತೆ.
ಜುನೈದ್ ಈ ವಿಚಾರದಲ್ಲಿ ಶಫಿ ವಿರುದ್ಧ ದೂರು ನೀಡುತ್ತಾನೆ.‌ ಶಫಿಗೆ ದೊಡ್ಡಪೇಟೆ ಪೊಲೀಸರು ಶರಣಾಗಲು ಸೂಚಿಸಿದ್ದಾರೆ.
ಮಾಹಿತಿ ಕೃಪೆ : @ ಸುದ್ದಿ ಲೈವ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

1 hour ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

5 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

7 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

7 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

24 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 day ago