ರಿಪ್ಪನ್ ಪೇಟೆ : ಭೂ ಪರಿಪರ್ವತನೆಗಾಗಿ ಒತ್ತಾಯಿಸಿ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಕುಮಾರ್ ಆರ್.ವಿ. ಶಿವಮೊಗ್ಗದ ಕೆಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಆನಂದರಾವ್ ಬಡಾವಣೆಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಏಕಾಂಗಿ ಹೋರಾಟ ನಡೆಸಿದ್ದಾರೆ.
ಹೊಸನಗರ ತಾ. ಬೆನವಳ್ಳಿ ಸರ್ವೆ ನಂಬರ್158 2 ಎಕರೆ ಜಮೀನಿಗೆ ಸೈಟ್ ನಿರ್ಮಿಸಲು ಭೂಪರಿವರ್ತನೆಗೆ ನಿರೂಪ್ ಕುಮಾರ್ ಅಕ್ಟೋಬರ್ ತಿಂಗಳಲ್ಲಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಭೂ ಪರಿವರ್ತನೆಯನ್ನು ನಗರ ಮತ್ತು ಗ್ರಾಮಾಂತರ ಯೋಜನೆಯ ಅಧಿಕಾರಿಗಳು 30 ದಿನಗಳಲ್ಲಿ ಇದರ ಸಾಧಕ ಭಾದಕದ ಬಗ್ಗೆ ಸಾರ್ವಜನಿಕರಿಗೆ ನೀಡಬೇಕು.
ಆದರೆ ಎರಡು ತಿಂಗಳಾದರೂ ಭೂ ಪರಿವರ್ತನೆ ಬಗ್ಗೆ ಕೇಳಿದರೆ ನಿಮ್ಮ ಜಮೀನು ರಾಜ್ಯ ಹೆದ್ದಾರಿಗೆ ಸಂಪರ್ಕಿಸುವುದಿಲ್ಲವೆಂದು ಸುಳ್ಳು ಹೇಳಿ ಅರ್ಜಿಯನ್ನ ತಿರಸ್ಕರಿಸಿದ್ದಾರೆ ಎಂದು ಆರೋಪಿಸಿ ನಿರೂಪ್ ಇಂದು ನಗರದ ಕಚೇರಿಯಲ್ಲಿ ಧರಣಿಕುಳಿತಿದ್ದಾರೆ.
ಆನ್ ಲೈನ್ ನಲ್ಲಿ ಸಲ್ಲಿಸಲಾದ ಬಹುತೇಕ ಅರ್ಜಿಗಳನ್ನ ಇಲ್ಲಿನ ಅಧಿಕಾರಿಗಳು ತಿರಸ್ಕರಿಸುತ್ತಾರೆ. 30 ದಿನಗಳಲ್ಲಿ ಭೂಪರಿವರ್ತನೆ ಏನಾಗಿದೆ ಎಂಬುದು ಆರ್ಡರ್ಆಗಬೇಕು ಆದರೆ ಅರ್ಜಿಗಳು ಹಾಗೆಯೇ ಅಧಿಕಾರಿಗಳ ಕಂಪ್ಯೂಟರ್ ಗಳಲ್ಲಿ ಲಾಕ್ ಆಗ್ತಾವೆ. ಸ್ಥಳಕ್ಕೆ ಆಗಮಿಸಿ ವೀಕ್ಷಿಸಿ ಹೋಗುವ ಫೀಲ್ಡ್ ಆಪೀಸರ್ಸ್ ರಾಜ್ಯ ಹೆದ್ದಾರಿಯಾದ ಹೊಸನಗರ ಮತ್ತು ಶಿವಮೊಗ್ಗದ ರಸ್ತೆಯ ಬಳಿಯಲ್ಲಿಯೇ ನನ್ನ ಜಮೀನಿದೆ ಆದರೆ ಆಧಿಕಾರಿಗಳು ಜಮೀನಿಗೆ ಹೋಗಲು ದಾರಿ ಇಲ್ಲವೆಂದು ತೀರ ಬಾಲಿಶಃ ಉತ್ತರ ನೀಡುತ್ತಾರೆ. ಒಂದು ವೇಳೆ ನನ್ನ ಅರ್ಜಿಯನ್ನ ಪುರಸ್ಕರಿಸದೆ ಇದ್ದರೆ ನಾನು ಇಲ್ಲಿಂದ ಕದಲುವುದಿಲ್ಲವೆಂದು ನಿರೂಪ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್