ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚಳದ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಒಂಬತ್ತು ಕಾಲೇಜುಗಳು ಹಾಗೂ ನಾಲ್ಕು ಶಾಲೆಗಳಿ ರಜೆ ಘೋಷಿಸಲಾಗಿದೆ.
ಮಕ್ಕಳಲ್ಲಿ ಕೊರೋನ ಹೆಚ್ಚಳವಾದರೆ ಕ್ಲಸ್ಟರ್ ರೀತಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊರೋನ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಈಶ್ವರಪ್ಪ ಇಂದು ಸಂಜೆ ಯಾವ ಯಾವ ಶಾಲೆಗಳು ನಾಳೆ ರಜೆ ಘೋಷಿಸಲಿವೆ ಎಂದು ತಿಳಿಸಿದ್ದರು.
ಅದರಂತೆ ರಾಗಿಗುಡ್ಡದ ಅಂಬೇಡ್ಕರ್ ವಸತಿ ಶಾಲೆ, ಮುರಾರ್ಜಿ ಶಾಲೆ, ಮುರಾರ್ಜಿ ಕಾಲೇಜು, ತೀರ್ಥಹಳ್ಳಿಯ ಬಸವಾನಿ, ಭದ್ರಾವತಿ ಶಿವಮೊಗ್ಗ ಬಿಹೆಚ್ ರಸ್ತೆಯಲ್ಲಿ ಕಾಲೇಜುಗಳು ಮಾಳೂರು ಶಾಲೆ ಸೇರಿದಂತೆ 9 ಕಾಲೇಜು ಮತ್ತು 4 ಶಾಲೆಗಳು ನಾಳೆ ಬಂದ್ ಆಗಲಿವೆ.
ಯಾವುದೇ ಶಾಲೆಗಳಲ್ಲಿ ಅಥವಾ ಕಾಲೇಜುಗಳಲ್ಲಿ 5 ಕ್ಕಿಂತ ಹೆಚ್ಚು ಪಾಸಿಟಿವ್ ಪತ್ತೆಯಾದರೆ ಮೂರು ದಿನ ರಜೆ ಘೋಷಿಸಲಾಗುತ್ತದೆ. ಯಾವ ಶಾಲೆಯಲ್ಲಿ 20 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾದರೆ ಆ ಶಾಲೆಗಳು 7 ದಿನಗಳ ಮಟ್ಟಿಗೆ ರಜೆ ಆಗಲಿದೆ.
ಆದರೆ ಕೊರೋನ ಭಯಕ್ಕೆ ಹೆಚ್ಚಿನ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬರುತ್ತಾ ಇಲ್ಲ. ಈ ವಿಷಯ ಬೆಳಿಗ್ಗೆ ಸಚಿವರ ಸಮ್ಮುಖದಲ್ಲಿ ಚರ್ಚೆ ಆಗಿತ್ತು. ಆದರೆ ಮೂರನೇ ಅಲೆ ಸಧ್ಯಕ್ಕೆ ಕ್ಯಾಶ್ಯುಯಾಲಿಟಿ ಇಲ್ಲದ ಕಾರಣ ಎಲ್ಲವನ್ನೂ ನಿವಾರಿಸಿಕೊಂಡು ಹೋಗಲಾಗುತ್ತಿದೆ ಎಂದೂ ತಿಳಿದುಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್